ಸುಳ್ಯ:ಭಾರತದಲ್ಲಿ ಜನರು ತಮ್ಮ ತಮ್ಮ ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ನುಡಿದರು.
ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಯಾವುದೇ ಜಾತಿ, ಧರ್ಮ, ಮತ ಎಂಬ ಬೇಧಭಾವ ಇಲ್ಲದೆ ಒಟ್ಟಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು, ದೇಶದ ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸುತ್ತಾ , ಸೌಹಾರ್ದತೆಯಿಂದ ಬಾಳಿದಾಗ ಸದೃಢ ಭಾರತ ನಮ್ಮದಾಗುತ್ತದೆ ಎಂದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.
ಕಾಲೇಜಿನ ಉಪನ್ಯಾಸಕ ವೃಂದವರು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…