ಸುಳ್ಯ: ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಡಾ। ಮಾಧವ ಭಟ್ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ। ಬಾಲಚಂದ್ರ ಗೌಡ ಎಂ ಅವರು ಶುಭ ಹಾರೈಸಿದರು .
ಸಮಾರಂಭದ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ। ಗಿರಿಧರ ಗೌಡ , ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಉದಯ ಕೃಷ್ಣ ಬಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.
ಆರಂಭದಲ್ಲಿ ಉಪನ್ಯಾಸಕಿ ರಾಜೇಶ್ವರಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬಳಿಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುವ ಮೂಲಕ ತರಬೇತಿಯನ್ನು ಸಂಪನ್ಮೂಲ ವ್ಯಕಿಗಳಾದ ಡಾ। ಮಾಧವ ಭಟ್ ಅವರು ನಡೆಸಿಕೊಟ್ಟರು. ಈ ತರಭೇತಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರು ಭಾಗವಹಿಸಿದ್ದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…