ಸುಳ್ಯ: ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಡಾ। ಮಾಧವ ಭಟ್ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ। ಬಾಲಚಂದ್ರ ಗೌಡ ಎಂ ಅವರು ಶುಭ ಹಾರೈಸಿದರು .
ಸಮಾರಂಭದ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ। ಗಿರಿಧರ ಗೌಡ , ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಉದಯ ಕೃಷ್ಣ ಬಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.
ಆರಂಭದಲ್ಲಿ ಉಪನ್ಯಾಸಕಿ ರಾಜೇಶ್ವರಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬಳಿಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುವ ಮೂಲಕ ತರಬೇತಿಯನ್ನು ಸಂಪನ್ಮೂಲ ವ್ಯಕಿಗಳಾದ ಡಾ। ಮಾಧವ ಭಟ್ ಅವರು ನಡೆಸಿಕೊಟ್ಟರು. ಈ ತರಭೇತಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರು ಭಾಗವಹಿಸಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…