Advertisement
MIRROR FOCUS

ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭ……

Share

ಮಳೆಗಾಲ ದೂರವಾಗುತ್ತಿದೆಯಾ ? ಹವಾಮಾನ ಇಲಾಖೆಯ ವರದಿ ಹಾಗೂ ಮಳೆ ಬಿದ್ದ ಲೆಕ್ಕದ ಬಗ್ಗೆ ಬಾಳಿಲದ  ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…..


ಹವಾಮಾನ ಇಲಾಖೆಯ ಪ್ರಕಾರ ನಿನ್ನೆಯಿಂದ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತದ ಹಿಂತೆಗೆತ ಆರಂಭವಾಗಿದೆ.

1961 ರ ಬಳಿಕ ಅತ್ಯಂತ ವಿಳಂಬವಾಗಿ ಹಿಂದೆ ಸರಿಯುತ್ತಿದೆ. ಇಲಾಖೆಯ ಪ್ರಕಟಣೆ ಪ್ರಕಾರ ನಿನ್ನೆ ಉತ್ತರ ರಾಜಸ್ಥಾನ,ಪಂಜಾಬ್ ಹಾಗೂ ಹರ್ಯಾಣದ ಕೆಲವು ಭಾಗಗಳಿಂದ ಮುಂಗಾರು ಮಳೆ ಹಿಂದೆ ಸರಿದಿದೆ. ಸಾಮಾನ್ಯವಾಗಿ ಜೂನ್ 1 ಭಾರತಕ್ಕೆ ಕಾಲಿಡುವ ನೈರುತ್ಯ ಮುಂಗಾರು ಸೆ.1 ರಿಂದ ಆರಂಭಿಸಿ ಸೆ.30 ರ ವೇಳೆಗಾಗುವಾಗ ಇಡೀ ದೇಶದಿಂದ ಹಿಂದೆ ಸರಿಯುವುದು ವಾಡಿಕೆ. ಈ ಬಾರಿ ತಡವಾಗಿ ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಇದೀಗ ಅತ್ಯಂತ ತಡವಾಗಿ ಹಿಂದೆ ಸರಿಯುತ್ತಿದೆ. ಈ ವರ್ಷದ ಆರಂಭದಲ್ಲಿ ಮುಂಗಾರು ಮಳೆಯ ಕೊರತೆ ಇರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲ ಮುನ್ಸೂಚನೆಗಳನ್ನು ಸುಳ್ಳಾಗಿಸಿ ದೇಶದಾದ್ಯಂತ ಶೇ.10 ರ ಅಧಿಕ ಮಳೆ ದಾಖಲಾಯಿತು.!

ಮಳೆಯೊಂದಿಗೆ ಮಾತುಕತೆ:

ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ
ಮಹಾ/ಮಳೆ ನಕ್ಷತ್ರ ಹಸ್ತಾ ( ಸೆ.27 – ಅ.10) ಅವಧಿಯಲ್ಲಿ ದಾಖಲಾದ ಮಳೆ = 166 ಮಿ.ಮೀ.( ಕಳೆದ ವರ್ಷ 148 ಮಿ.ಮೀ.)
ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 189
2001 – 2019 = 143
1976 – 2019 = 169
ಗರಿಷ್ಟ 1999 ರಲ್ಲಿ ದಾಖಲಾದ 445
ಕನಿಷ್ಟ 2005 ರಲ್ಲಿ ದಾಖಲಾದ 024

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

16 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

19 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

19 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

23 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

23 hours ago