Advertisement
MIRROR FOCUS

ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭ……

Share

ಮಳೆಗಾಲ ದೂರವಾಗುತ್ತಿದೆಯಾ ? ಹವಾಮಾನ ಇಲಾಖೆಯ ವರದಿ ಹಾಗೂ ಮಳೆ ಬಿದ್ದ ಲೆಕ್ಕದ ಬಗ್ಗೆ ಬಾಳಿಲದ  ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…..


ಹವಾಮಾನ ಇಲಾಖೆಯ ಪ್ರಕಾರ ನಿನ್ನೆಯಿಂದ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತದ ಹಿಂತೆಗೆತ ಆರಂಭವಾಗಿದೆ.

1961 ರ ಬಳಿಕ ಅತ್ಯಂತ ವಿಳಂಬವಾಗಿ ಹಿಂದೆ ಸರಿಯುತ್ತಿದೆ. ಇಲಾಖೆಯ ಪ್ರಕಟಣೆ ಪ್ರಕಾರ ನಿನ್ನೆ ಉತ್ತರ ರಾಜಸ್ಥಾನ,ಪಂಜಾಬ್ ಹಾಗೂ ಹರ್ಯಾಣದ ಕೆಲವು ಭಾಗಗಳಿಂದ ಮುಂಗಾರು ಮಳೆ ಹಿಂದೆ ಸರಿದಿದೆ. ಸಾಮಾನ್ಯವಾಗಿ ಜೂನ್ 1 ಭಾರತಕ್ಕೆ ಕಾಲಿಡುವ ನೈರುತ್ಯ ಮುಂಗಾರು ಸೆ.1 ರಿಂದ ಆರಂಭಿಸಿ ಸೆ.30 ರ ವೇಳೆಗಾಗುವಾಗ ಇಡೀ ದೇಶದಿಂದ ಹಿಂದೆ ಸರಿಯುವುದು ವಾಡಿಕೆ. ಈ ಬಾರಿ ತಡವಾಗಿ ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಇದೀಗ ಅತ್ಯಂತ ತಡವಾಗಿ ಹಿಂದೆ ಸರಿಯುತ್ತಿದೆ. ಈ ವರ್ಷದ ಆರಂಭದಲ್ಲಿ ಮುಂಗಾರು ಮಳೆಯ ಕೊರತೆ ಇರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲ ಮುನ್ಸೂಚನೆಗಳನ್ನು ಸುಳ್ಳಾಗಿಸಿ ದೇಶದಾದ್ಯಂತ ಶೇ.10 ರ ಅಧಿಕ ಮಳೆ ದಾಖಲಾಯಿತು.!

ಮಳೆಯೊಂದಿಗೆ ಮಾತುಕತೆ:

ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ
ಮಹಾ/ಮಳೆ ನಕ್ಷತ್ರ ಹಸ್ತಾ ( ಸೆ.27 – ಅ.10) ಅವಧಿಯಲ್ಲಿ ದಾಖಲಾದ ಮಳೆ = 166 ಮಿ.ಮೀ.( ಕಳೆದ ವರ್ಷ 148 ಮಿ.ಮೀ.)
ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 189
2001 – 2019 = 143
1976 – 2019 = 169
ಗರಿಷ್ಟ 1999 ರಲ್ಲಿ ದಾಖಲಾದ 445
ಕನಿಷ್ಟ 2005 ರಲ್ಲಿ ದಾಖಲಾದ 024

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

8 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

12 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

13 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

15 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

16 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago