ವಿಶೇಷ ವರದಿಗಳು

ನೋವುಂಡವರ ಸಂತೈಸುವ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯ ನೋವಿನ ಕತೆ…!

Share

ನಡುಗಲ್ಲು: ಅವರು ಮಹಿಳೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆ. ಹಲವಾರು ಮಂದಿಗೆ ಸಹಾಯ ಮಾಡುತ್ತಾರೆ. ಇಲಾಖೆಯ ಮೂಲಕ ಬೇಕಾದ್ದು ತೆಗೆಸಿಕೊಡಲು, ನೋವುಂಡವರಿಗೆ ನೆರವಾಗುತ್ತಾರೆ, ಮನೆ ಇಲ್ಲದವರಿಗೆ ದಾರಿ ತೋರುತ್ತಾರೆ. ಇಂತಹ ಕಾರ್ಯಕರ್ತೆಯ ನೋವಿನ ಕತೆ ಕೇಳಲು ಜನರಿಲ್ಲ, ಕತೆ ಹೇಳಿಕೊಂಡು ಈ ಮಹಿಳೆ ಹೋಗುತ್ತಿಲ್ಲ…!. ಅದೇನು ಕತೆ ಇಲ್ಲಿದೆ ಓದಿ….

ಅವರು ಹುಟ್ಟು ವಿಕಲಚೇತನೆ. ನಡೆಯಲು ಅಸಾಧ್ಯವಾಗಿ ಕುಂಟುತ್ತಲೇ ನಡೆಯುವ ಸ್ಥಿತಿ. ಕೆಲಸವಿದ್ದರೂ ಕೆಲಸಕ್ಕೆ ಹೋಗಲಾಗದ ಅಸಹಾಯಕತೆ. ದೇಹಕ್ಕೆ ಅಂಟಿದ ಶಾಪಕ್ಕೆ ದೂರವಾದ ಗಂಡ. ಕಿತ್ತು ತಿನ್ನುವ ಬಡತನ. ಸ್ವಂತ ನೆಲೆಯಿಲ್ಲದೆ ಅಲೆದಾಟ. ಇಂತಹ ಅಘಾತಗಳಿಂದ ಕಂಗೆಟ್ಟ  ಜೀವನ. ಇದು ವಿಕಲಚೇತನ ಹೊಂದಿದ ಆ ಮಹಿಳೆಯ ಕತೆಯಲ್ಲ, ಜೀವನ.

ಪಂಜ ಗ್ರಾಮದ ಐವತ್ತೊಕ್ಲು ಪಲ್ಲೋಡಿ ಮನೆ ಅವರ ಪತ್ನಿ ಮೀನಾಕ್ಷಿ ಹುಟ್ಟಿನಿಂದಲೆ ಕಾಲಿನ ಅಂಗವೈಕಲ್ಯತೆಗೆ ಒಳಗಾದವರು. ನಡೆದಾಡಲು ಕಷ್ಟ. ಕೆಲಸ ಮಾಡಲು ಆಗದ ಸ್ಥಿತಿ. ಇಂತಹ  ಸ್ಥಿತಿಯಲ್ಲಿ ಗಂಡ ಇವರನ್ನು ಕೈ ಹಿಡಿದು- ಕೈ ಬಿಟ್ಟಿದ್ದಾರೆ. ವಯಸ್ಸಿಗೆ ಬಂದ ಇಬ್ಬರು ಮಕ್ಕಳು ಇದ್ದಾರೆ. ಅವರು ಶಾಲೆಗೆ ಹೋಗುತ್ತಿದ್ದಾರೆ. ಇವರಿಗೆ ಸ್ವಂತ ನೆಲೆಯಿಲ್ಲ. ಹೀಗಾಗಿ ಅಲೆದಾಡುತ್ತ. ಸಿಕ್ಕಲೆಲ್ಲ ಕೆಲಸ ಮಾಡುತ್ತಲೇ ತಾಯಿ , ಮಕ್ಕಳಿಬ್ಬರನ್ನು ಸಾಕುತ್ತಿದ್ದಾರೆ.

ವಿಕಲಾಂಗತೆ ಎಂದು ಗೊತ್ತಿದ್ದರೂ ಮದುವೆಯಾಗಲು ಮುಂದೆ ಬಂದ ಗಂಡನ ಬಗ್ಗೆ ಗೌರವಿತ್ತು. ಮಕ್ಕಳಾದ ಬಳಿಕ ಗಂಡ  ಮದ್ಯದ ದಾಸನಾದ. ಕೊನೆಗೆ ಪತ್ನಿಯಿಂದ ಆತ ದೂರವಾದ. ಬಳಿಕ ಬೀದಿಗೆ ಬಿದ್ದ ಮೀನಾಕ್ಷಿ ಕೂಲಿ ಕೆಲಸ ಮಾಡುತ್ತ ಗಂಡು ಮಕ್ಕಳಿಬ್ಬರನ್ನು ಸಾಕಲಾರಂಬಿಸಿದರು. ಸುಬ್ರಹ್ಮಣ್ಯ, ಗುತ್ತಿಗಾರು ಮುಂತಾದ ಕಡೆಗಳ ಅಂಗಡಿ ಹೊಟೇಲುಗಳಲ್ಲಿ ಕಾಲು ಸ್ವಾಧೀನವಿಲ್ಲದೆ ಇದ್ದರೂ ಹೋಗಿ ತೆರಳಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಮಕ್ಕಳಿಬ್ಬರನ್ನು ಓದಿಸಿ ಅವರ ಜೀವನದ ಭಾರ ಹೊತ್ತಿದ್ದಾರೆ.ಈಗ ಇವರು ಗುತ್ತಿಗಾರಿನ ಹೊಟೇಲೊಂದರಲ್ಲಿ  ಕೆಲಸ ಮಾಡುತ್ತಿದ್ದಾರೆ. ಪಕ್ಕದ ನಡುಗಲ್ಲಿನಲ್ಲಿ ಗುಡಿಸಲಿನಂತಹ ಕೊಠಡಿಯೊಂದನ್ನು ಕಡಿಮೆಗೆ ಬಾಡಿಗೆ ಪಡೆದು ಮಕ್ಕಳ ಜತೆ ಅಲ್ಲಿ ತಾತ್ಕಾಲಿಕ ವಾಸವಿದ್ದಾರೆ. ಮಕ್ಕಳಿಬ್ಬರು ಗುತ್ತಿಗಾರು ಶಾಲೆಗೆ ಹೋಗುತಿದ್ದು ಓರ್ವ ಪುತ್ರ 10ನೇ ತರಗತಿ ಮತ್ತು ಇನ್ನೋರ್ವ 9 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.

ಗಂಡನಿಂದ ದೂರವಾದ ಬಳಿಕ  ಸ್ಥಳೀಯ ಪ್ರಮುಖರೊಬ್ಬರಿಗೆ ಹೇಳಿದಾಗ ಪಲ್ಲೋಡಿಯಲ್ಲಿ ಒಂದು ಕಡೆ ಜಾಗವಿರುವ ಬಗ್ಗೆ ಮತ್ತು ಅಲ್ಲಿ ವಾಸವಿರುವಂತೆ ಸಲಹೆ ನೀಡಿದ್ದರು. ಬಳಿಕ ಮೀನಾಕ್ಷಿ ಅವರು ಪಲ್ಲೋಡಿಯ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದರು. ಅಂದು ತಾ.ಪಂ ಸದಸ್ಯೆಯೊಬ್ಬರು 20,000 ರೂ ಸಹಾಯಧನದ ಒದಗಿಸಿದ್ದು ಅದು ಸೇರಿ ಸಾಲ ಮಾಡಿ ಸಣ್ಣದೊಂದು ಶೆಡ್ ನಿರ್ಮಿಸಿಕೊಂಡಿದ್ದಾರೆ.ಶೆಡ್ ನಿರ್ಮಸಿದ ಅದೇ ಜಾಗಕ್ಕೆ 94ಸಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ್ದರು. ಅದು ನಿರಾಕರಿಸಲ್ಪಟ್ಟಿದೆ. ಪಡಿತರ ಚೀಟಿ, ಆಧಾರ್ ಕಾರ್ಡು ಎಲ್ಲವೂ ಇದೆ. 2008ರಿಂದ ಮನೆ ತೆರಿಗೆ ಪಾವತಿಸುತ್ತಿದ್ದಾರೆ. ಇಷ್ಟಿದ್ದರೂ ಶೋಷಿತ ಕುಟುಂಬಕ್ಕೆ ಇನ್ನು ಸೂರು ದೊರಕಿಲ್ಲ. ಯಾವ ಯೋಜನೆಯಲ್ಲೂ ನಿವೇಶನ ಮಂಜುರಾತಿಗೊಂಡಿಲ್ಲ…!

ಈ   ಮಹಿಳೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆ ಕೂಡ. ಈ ಸೇವೆಗಾಗಿ ಮಾಸಿಕ 3000 ರೂ ವೇತನ ದೊರಕುತ್ತದೆ. ವಿಕಲಚೇತನ ಸಹಾಯಧನ 600 ರೂ ಮಾಸಿಕ ಬರುತ್ತದೆ ಹೊರತು ಪಡಿಸಿ ಬೇರೆನೂ ಆದಾಯವಿಲ್ಲ. ಶೆಡ್ ಇದ್ದರೂ ಅದನ್ನು ಸುಸಜ್ಜಿತಗೊಳಿಸಿ ಮನೆಯಾಗಿ ಪರಿವರ್ತಿಸಲು ಹಣವಿಲ್ಲ.

ಈ ಹಿಂದೆ ಸಚಿವರಾಗಿದ್ದ ಯು.ಟಿ ಖಾದರ್ ಅವರಿಗೆ ನಿವೇಶನ ಒದಗಿಸುವಂತೆ ಮನವಿ ಸಲ್ಲಿಸಿದ್ದರು. ಸಚಿವರು ತಹಶೀಲ್ದಾರ್ ಅವರಿಗೆ ಕ್ರಮಕ್ಕೆ ಸೂಚಿಸಿದ್ದರು. ಬಳಿಕವೂ ಫಲ ಸಿಕ್ಕಿಲ್ಲ. ವಿಕಲಚೇತನರ ಪುನರ್ವಸತಿ ಕಲ್ಯಾಣ ಇಲಾಖೆಗೂ ಅನೇಕ ಭಾರಿ ಮನವಿ ಸಲ್ಲಿಸಿದ್ದಾರೆ. ಎಲ್ಲ ಇಲಾಖೆಗಳಿಗೂ ಮನವಿ ಸಲ್ಲಿಸಿ ಸಹಾಯಕ್ಕೆ ಬರುವಂತೆ ಕೇಳಿಕೊಂಡಿದ್ದಾರೆ. ಯಾವುದೂ ಪ್ರಯೋಜನಕ್ಕೆ ಬಂದಿಲ್ಲ. ಅತ್ತೆ ಮಾವ ಹಾಗೂ ತವರು ಮನೆಯ ಜತೆ ಮೀನಾಕ್ಷಿಯವರಿಗೆ ಒಳ್ಳೆಯ ಸಂಬಂಧವಿದೆ. ಮದುವೆ ಬಳಿಕವೂ ತವರು ಮನೆಯವರು ಸಾಕಷ್ಟು ಸಹಾಯ ಮಾಡಿದ್ದಾರೆ. ಮಕ್ಕಳನ್ನು ಒಳ್ಳೆ ದಾರಿಗೆ ಹಾಕಬೇಕು ಎನ್ನುವುದೆ ನನ್ನ ಕನಸು ಎಂದು ಕಣ್ಣೀರಿಡುತ್ತಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

9 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

11 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

12 hours ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

1 day ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

1 day ago