ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.
ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…