ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.
ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…