ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.
ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…