ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.
ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…