ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.
ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…