ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.
ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…