ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.
ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…