ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.
ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…