Advertisement
ಸುದ್ದಿಗಳು

ನ.ಪಂ.ಚುನಾವಣೆ : ಬಿಜೆಪಿ ಪ್ರಣಾಳಿಕೆ ಬಿಡುಗಡೆ

Share

ಸುಳ್ಯ: ಸುಳ್ಯ ನಗರ ಪಂಚಾಯತ್  ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು.

ಶಾಸಕ ಎಸ್.ಅಂಗಾರ ಪ್ರಣಾಳಿಕೆ ಬಿಡುಗಡೆ ಮಾಡಿದರು. ನಗರ ಸಭೆಯಲ್ಲಿ ಇ-ಆಡಳಿತ, ಆನ್ ಲೈನ್ ಸೌಲಭ್ಯಕ್ಕೆ ಆದ್ಯತೆ, ನಾಗರಿಕರಿಗೆ ತ್ವರಿತ ಸೇವೆ, ಭ್ರಷ್ಟಾಚಾರ ರಹಿತ ಆಡಳಿತ, ಸಕಾಲ ಯಶಸ್ವಿ ನಿರ್ವಹಣೆಗೆ ಕ್ರಮ, ಖಾತೆ ಬದಲಾವಣೆ ಸರಳೀಕರಣ, ಕಟ್ಟಡ ಪರವಾನಗಿ, ಡೋರ್ ನಂಬ್ರ, ಖಾತೆ ಬದಲಾಣೆಗೆ ಏಕ ಗವಾಕ್ಷಿ, ಟ್ರೇಡ್ ಲೈಸೆನ್ಸ್ ಶುಲ್ಕ ಮರು ಪರಿಶೀಲನೆ, ನಗರದ ಸಮಗ್ರ ಅಭಿವೃದ್ಧಿಗೆ ಕ್ರಮ, ಶುದ್ಧ ಕುಡಿಯುವ ನೀರು, ಗುಣ ಮಟ್ಟದ ವಿದ್ಯುತ್, ಘನ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಕ್ರಮ, ರಸ್ತೆ ಅಭಿವೃದ್ಧಿಗೆ ಕ್ರಮ, ನಿವೇಶನ ರಹೀತರಿಗೆ ನಿವೇಶನ, ವಸತಿ ರಹಿತರಿಗೆ ವಸತಿ ಸೌಲಭ್ಯ, ನ.ಪಂ.ನಲ್ಲಿ ದಾಖಲೆಗಳ ನಿರ್ವಹಣೆಗೆ ಪ್ರತ್ಯೇಕ ದಾಖಲೆ ಕೊಠಡಿ, ಇ-ಫೈಲಿಂಗ್ ವ್ಯವಸ್ಥೆ, ಶುಲ್ಕ ಪಾವತಿಗೆ ಮೆಸ್ಕಾಂ ಮಾದರಿಯಲ್ಲಿ ಕಿಯೋಸ್ಕ್ ಗಳ ಸ್ಥಾಪನೆ, ಕಟ್ಟಡ ನಿರ್ಮಾಣ ಪರವಾನಿಗೆಗೆ ಏಕ ಗವಾಕ್ಷಿ, ತೆರಿಗೆ ಪಾವತಿಗೆ ಆನ್ ಲೈನ್ ವ್ಯವಸ್ಥೆ, ಸೌಲಭ್ಯಗಳನ್ನು ಫಲಾನುಭವಿಗಳ ಖಾತೆಗೆ ನೇರ ಪಾವತಿ ವ್ಯವಸ್ಥೆ, ಜನನ ಮರಣ ಪತ್ರಗಳ ಶೀಘ್ರ ನೀಡಿಕೆಗೆ ಕ್ರಮ, ಕಾಮಗಾರಿಗಳ ಪಾರದರ್ಶಕ ಅನುಷ್ಠಾನಕ್ಕೆ ಅನುಷ್ಠಾನ ಸಮಿತಿ. ಪುರಭವನದ ಅಭಿವೃದ್ಧಿ, 25 ಜನವಸತಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ, ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗೆ ಪಯಸ್ವಿನಿ ನದಿಗೆ ನಾಗಪಟ್ಟಣ, ಕಾಂತಮಂಗಲ, ಓಡಬಾಯಿಯಲ್ಲಿ ಮತ್ತು ಕಂದಡ್ಕ ಹೊಳೆಗೆ ಕೊಡಿಯಾಲಬೈಲ್, ಮೊಗರ್ಪಣೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ, ಒಳಚರಂಡಿ ಯೋಜನೆಯ ಸಮಗ್ರ ಅಭಿವೃದ್ಧಿ, ಕೊಳಚೆ ನೀರು, ದ್ರವ ತ್ಯಾಜ್ಯ ಸಂಸ್ಕರಣೆಗೆ ವೈಜ್ಞಾನಿಕ ತಂತ್ರಜ್ಞಾನ ಅಳವಡಿಕೆ, ಘನ ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಾಪನೆ, ಕಸ ವಿಲೇವಾರಿ ತಪಾಸಣೆಗೆ ಮೊಬೈಲ್ ಸ್ಕ್ವಾಡ್, ಸ್ವಚ್ಛ ಸುಳ್ಯಕ್ಕೆ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ, ಬೀದಿ ದೀಪಗಳಲ್ಲಿ ಸೌರ ವಿದ್ಯುತ್ ಅಳವಡಿಕೆ, ಮನೆಗಳಲ್ಲಿ ಸೋಲಾರ್ ಅಳವಡಿಸಿದವರಿಗೆ ತೆರಿಗೆಯಲ್ಲಿ ಶೇ.5 ರಿಯಾಯತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟ ಶುಲ್ಕಕ್ಕೆ ಸಹಾಯಧನ, ಸರ್ಕಾರಿ ಸೇವೆಗಳ ಮಾಹಿತಿಗಾಗಿ ಸೇವಾ ಕೇಂದ್ರ ಸ್ಥಾಪನೆ, ಕಾಲೋನಿಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ ಪ್ರಣಾಳಿಕೆಯಲ್ಲಿ ನೀಡುವ ಪ್ರಮುಖ ಭರವಸೆಗಳು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ನಗರ ಬಿಜೆಪಿ ಅಧ್ಯಕ್ಷ ಹಾಗು ನ.ಪಂ.ಅಭ್ಯರ್ಥಿವಿನಯಕುಮಾರ್ ಕಂದಡ್ಕ, ಅಭ್ಯರ್ಥಿಗಳಾದ ಹರೀಶ್ ಬೂಡುಪನ್ನೆ, ಶಶಿಕಲಾ ಎ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್ ರೈ, ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಪ್ರಮುಖರಾದ ಪಿ.ಕೆ.ಉಮೇಶ್, ಸೋಮನಾಥ ಪೂಜಾರಿ, ಗಿರೀಶ್ ಕಲ್ಲುಗದ್ದೆ, ವೇದಾವತಿ ಮಾಣಿಬೆಟ್ಟು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 hour ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago