ಸುಳ್ಯ : ಮೂರು ಬಾರಿ ನ.ಪಂ.ಆಡಳಿತ ನಡೆಸಿದರೂ ನಗರದ ಅಭಿವೃದ್ದಿ ನಡೆಸಲು ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಆಡಳಿತದ ವಿರುದ್ಧ ಇರುವ ಅಲೆಯಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಾಭ ಆಗಲಿದೆ. ಆದುದರಿಂದ ನಗರ ಪಂಚಾಯತ್ ಚುನಾವಣೆಯಲ್ಲಿ ಗೆಲುವಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ.ಶಹೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಧನಂಜಯ ಅಡ್ಪಂಗಾಯ, ಕೆ.ಪಿ.ಥಾಮಸ್, ರಾಜೀವಿ ಆರ್.ರೈ, ಪಿ.ಪಿ.ವರ್ಗೀಸ್, ಎಸ್.ಸಂಶುದ್ದೀನ್, ಪಿ.ಎ.ಮಹಮ್ಮದ್, ಸರ್ವೋತ್ತಮ ಗೌಡ, ಡಾ.ಬಿ.ರಘು, ಪಿ.ಎಸ್.ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ನಗರ ಪಂಚಯತ್ ಚುನಾವಣೆ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಯಿತು
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…