Advertisement
Political mirror

ಸುಳ್ಯ ನ.ಪಂ.ಚುನಾವಣೆ: ಎಸ್.ಡಿ.ಪಿ.ಐ. 9 ವಾರ್ಡ್ ಗಳಲ್ಲಿ ಸ್ಪರ್ಧೆ.

Share

# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ

 

ಸುಳ್ಯ : ಮೇ.29 ರಂದು ನಡೆಯುವ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಪೈಪೋಟಿ ನೀಡಲು ಎಸ್.ಡಿ.ಪಿ‌.ಐ ಪಕ್ಷ ಕೂಡ ಸಿದ್ಧತೆ ನಡೆಸಿದ್ದು. ಇದರಿಂದ ಚುನಾವಣೆ ಗೆ ತ್ರಿಕೋನ ಸ್ಪರ್ಧೆಯ ರಂಗು ತರಲಿದೆ.

20 ವಾರ್ಡ್ ಗಳಲ್ಲಿ ಒಂಭತ್ತು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ. ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿ ಸಿದ್ಧಗೊಂಡಿದೆ. ಪಕ್ಷದ ನಗರ ಅಧ್ಯಕ್ಷ ಅಬ್ದುಲ್ ಕಲಾಂ, ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ.ಕೆ‌.ಮುಸ್ತಫಾ, ನಗರ ಕಾರ್ಯದರ್ಶಿ ಮುಸ್ತಫಾ ಚೆಂಗಳ ಮತ್ತಿತರ ಪ್ರಮುಖರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಎಸ್.ಡಿ.ಪಿ.ಐ ಖಾತೆ ತೆರೆದಿತ್ತು. ಈ ಬಾರಿ ಇನ್ನಷ್ಟು ಕ್ಷೇತ್ರಗಳಲ್ಲಿ ಬಿರುಸಿನ ಸ್ಪರ್ಧೆ ನೀಡುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಮ್ಮರ್ ಸ್ಪರ್ಧೆ ಕುತೂಹಲ:

ಕಳೆದ ಚುನಾವಣೆ ಯಲ್ಲಿ 14ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೆ.ಎಸ್.ಉಮ್ಮರ್ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವುದು ಕುತೂಹಲ ಕೆರಳಿಸಿದೆ. ಕಳೆದ ಬಾರಿ ಗೆದ್ದ ವಾರ್ಡ್ ನಲ್ಲಿ ಮೀಸಲಾತಿ ಬದಲಾಗಿರುವ ಕಾರಣ ಅಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಆದುದರಿಂದ ಬೋರುಗುಡ್ಡೆ ವಾರ್ಡ್ ನಿಂದ ಸ್ಪರ್ಧೆ ಮಾಡುವುದಾಗಿ ಉಮ್ಮರ್ ಹೇಳಿದ್ದಾರೆ. ಅಭ್ಯರ್ಥಿ ಗಳ ಘೋಷಣೆ ಆಗುವ ಸಂದರ್ಭದಲ್ಲಿ ಅವರು ಎಸ್.ಡಿ.ಪಿ.ಐ ಪಟ್ಟಿಯಲ್ಲಿ ಇರುತ್ತಾರಾ ಅಥವಾ ಪಕ್ಷೇತರನಾಗಿ ಕಣದಲ್ಲಿ ಇರುತ್ತಾರಾ ಎಂಬುದು ಸದ್ಯದ ಕುತೂಹಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಮ್ಮರ್ ಪಕ್ಷದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಯುಕ್ತಿಕ ಕಾರಣಗಳಿಗಾಗಿ ರಜೆ ಪಡೆದ ಕಾರಣ ಪಕ್ಷದ ಚಟುವಟಿಕೆಗಳಿಂದ ಅವರು ದೂರ ಉಳಿದಿದ್ದರು ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

17 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

17 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago