# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ
ಸುಳ್ಯ : ಮೇ.29 ರಂದು ನಡೆಯುವ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಪೈಪೋಟಿ ನೀಡಲು ಎಸ್.ಡಿ.ಪಿ.ಐ ಪಕ್ಷ ಕೂಡ ಸಿದ್ಧತೆ ನಡೆಸಿದ್ದು. ಇದರಿಂದ ಚುನಾವಣೆ ಗೆ ತ್ರಿಕೋನ ಸ್ಪರ್ಧೆಯ ರಂಗು ತರಲಿದೆ.
20 ವಾರ್ಡ್ ಗಳಲ್ಲಿ ಒಂಭತ್ತು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ. ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿ ಸಿದ್ಧಗೊಂಡಿದೆ. ಪಕ್ಷದ ನಗರ ಅಧ್ಯಕ್ಷ ಅಬ್ದುಲ್ ಕಲಾಂ, ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ.ಕೆ.ಮುಸ್ತಫಾ, ನಗರ ಕಾರ್ಯದರ್ಶಿ ಮುಸ್ತಫಾ ಚೆಂಗಳ ಮತ್ತಿತರ ಪ್ರಮುಖರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಎಸ್.ಡಿ.ಪಿ.ಐ ಖಾತೆ ತೆರೆದಿತ್ತು. ಈ ಬಾರಿ ಇನ್ನಷ್ಟು ಕ್ಷೇತ್ರಗಳಲ್ಲಿ ಬಿರುಸಿನ ಸ್ಪರ್ಧೆ ನೀಡುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಮ್ಮರ್ ಸ್ಪರ್ಧೆ ಕುತೂಹಲ:
ಕಳೆದ ಚುನಾವಣೆ ಯಲ್ಲಿ 14ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೆ.ಎಸ್.ಉಮ್ಮರ್ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವುದು ಕುತೂಹಲ ಕೆರಳಿಸಿದೆ. ಕಳೆದ ಬಾರಿ ಗೆದ್ದ ವಾರ್ಡ್ ನಲ್ಲಿ ಮೀಸಲಾತಿ ಬದಲಾಗಿರುವ ಕಾರಣ ಅಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಆದುದರಿಂದ ಬೋರುಗುಡ್ಡೆ ವಾರ್ಡ್ ನಿಂದ ಸ್ಪರ್ಧೆ ಮಾಡುವುದಾಗಿ ಉಮ್ಮರ್ ಹೇಳಿದ್ದಾರೆ. ಅಭ್ಯರ್ಥಿ ಗಳ ಘೋಷಣೆ ಆಗುವ ಸಂದರ್ಭದಲ್ಲಿ ಅವರು ಎಸ್.ಡಿ.ಪಿ.ಐ ಪಟ್ಟಿಯಲ್ಲಿ ಇರುತ್ತಾರಾ ಅಥವಾ ಪಕ್ಷೇತರನಾಗಿ ಕಣದಲ್ಲಿ ಇರುತ್ತಾರಾ ಎಂಬುದು ಸದ್ಯದ ಕುತೂಹಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಮ್ಮರ್ ಪಕ್ಷದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಯುಕ್ತಿಕ ಕಾರಣಗಳಿಗಾಗಿ ರಜೆ ಪಡೆದ ಕಾರಣ ಪಕ್ಷದ ಚಟುವಟಿಕೆಗಳಿಂದ ಅವರು ದೂರ ಉಳಿದಿದ್ದರು ಎಂದು ಹೇಳಲಾಗುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…