Advertisement
Political mirror

ಸುಳ್ಯ ನ.ಪಂ.ಚುನಾವಣೆ: ಎಸ್.ಡಿ.ಪಿ.ಐ. 9 ವಾರ್ಡ್ ಗಳಲ್ಲಿ ಸ್ಪರ್ಧೆ.

Share

# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ

 

ಸುಳ್ಯ : ಮೇ.29 ರಂದು ನಡೆಯುವ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಪೈಪೋಟಿ ನೀಡಲು ಎಸ್.ಡಿ.ಪಿ‌.ಐ ಪಕ್ಷ ಕೂಡ ಸಿದ್ಧತೆ ನಡೆಸಿದ್ದು. ಇದರಿಂದ ಚುನಾವಣೆ ಗೆ ತ್ರಿಕೋನ ಸ್ಪರ್ಧೆಯ ರಂಗು ತರಲಿದೆ.

20 ವಾರ್ಡ್ ಗಳಲ್ಲಿ ಒಂಭತ್ತು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ. ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿ ಸಿದ್ಧಗೊಂಡಿದೆ. ಪಕ್ಷದ ನಗರ ಅಧ್ಯಕ್ಷ ಅಬ್ದುಲ್ ಕಲಾಂ, ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ.ಕೆ‌.ಮುಸ್ತಫಾ, ನಗರ ಕಾರ್ಯದರ್ಶಿ ಮುಸ್ತಫಾ ಚೆಂಗಳ ಮತ್ತಿತರ ಪ್ರಮುಖರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಎಸ್.ಡಿ.ಪಿ.ಐ ಖಾತೆ ತೆರೆದಿತ್ತು. ಈ ಬಾರಿ ಇನ್ನಷ್ಟು ಕ್ಷೇತ್ರಗಳಲ್ಲಿ ಬಿರುಸಿನ ಸ್ಪರ್ಧೆ ನೀಡುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಮ್ಮರ್ ಸ್ಪರ್ಧೆ ಕುತೂಹಲ:

ಕಳೆದ ಚುನಾವಣೆ ಯಲ್ಲಿ 14ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೆ.ಎಸ್.ಉಮ್ಮರ್ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವುದು ಕುತೂಹಲ ಕೆರಳಿಸಿದೆ. ಕಳೆದ ಬಾರಿ ಗೆದ್ದ ವಾರ್ಡ್ ನಲ್ಲಿ ಮೀಸಲಾತಿ ಬದಲಾಗಿರುವ ಕಾರಣ ಅಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಆದುದರಿಂದ ಬೋರುಗುಡ್ಡೆ ವಾರ್ಡ್ ನಿಂದ ಸ್ಪರ್ಧೆ ಮಾಡುವುದಾಗಿ ಉಮ್ಮರ್ ಹೇಳಿದ್ದಾರೆ. ಅಭ್ಯರ್ಥಿ ಗಳ ಘೋಷಣೆ ಆಗುವ ಸಂದರ್ಭದಲ್ಲಿ ಅವರು ಎಸ್.ಡಿ.ಪಿ.ಐ ಪಟ್ಟಿಯಲ್ಲಿ ಇರುತ್ತಾರಾ ಅಥವಾ ಪಕ್ಷೇತರನಾಗಿ ಕಣದಲ್ಲಿ ಇರುತ್ತಾರಾ ಎಂಬುದು ಸದ್ಯದ ಕುತೂಹಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಮ್ಮರ್ ಪಕ್ಷದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಯುಕ್ತಿಕ ಕಾರಣಗಳಿಗಾಗಿ ರಜೆ ಪಡೆದ ಕಾರಣ ಪಕ್ಷದ ಚಟುವಟಿಕೆಗಳಿಂದ ಅವರು ದೂರ ಉಳಿದಿದ್ದರು ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago