Advertisement
Political mirror

ಸುಳ್ಯ ನ.ಪಂ.ಚುನಾವಣೆ: ಎಸ್.ಡಿ.ಪಿ.ಐ. 9 ವಾರ್ಡ್ ಗಳಲ್ಲಿ ಸ್ಪರ್ಧೆ.

Share

# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ

 

ಸುಳ್ಯ : ಮೇ.29 ರಂದು ನಡೆಯುವ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಪೈಪೋಟಿ ನೀಡಲು ಎಸ್.ಡಿ.ಪಿ‌.ಐ ಪಕ್ಷ ಕೂಡ ಸಿದ್ಧತೆ ನಡೆಸಿದ್ದು. ಇದರಿಂದ ಚುನಾವಣೆ ಗೆ ತ್ರಿಕೋನ ಸ್ಪರ್ಧೆಯ ರಂಗು ತರಲಿದೆ.

20 ವಾರ್ಡ್ ಗಳಲ್ಲಿ ಒಂಭತ್ತು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ. ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿ ಸಿದ್ಧಗೊಂಡಿದೆ. ಪಕ್ಷದ ನಗರ ಅಧ್ಯಕ್ಷ ಅಬ್ದುಲ್ ಕಲಾಂ, ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ.ಕೆ‌.ಮುಸ್ತಫಾ, ನಗರ ಕಾರ್ಯದರ್ಶಿ ಮುಸ್ತಫಾ ಚೆಂಗಳ ಮತ್ತಿತರ ಪ್ರಮುಖರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಎಸ್.ಡಿ.ಪಿ.ಐ ಖಾತೆ ತೆರೆದಿತ್ತು. ಈ ಬಾರಿ ಇನ್ನಷ್ಟು ಕ್ಷೇತ್ರಗಳಲ್ಲಿ ಬಿರುಸಿನ ಸ್ಪರ್ಧೆ ನೀಡುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಮ್ಮರ್ ಸ್ಪರ್ಧೆ ಕುತೂಹಲ:

ಕಳೆದ ಚುನಾವಣೆ ಯಲ್ಲಿ 14ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೆ.ಎಸ್.ಉಮ್ಮರ್ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವುದು ಕುತೂಹಲ ಕೆರಳಿಸಿದೆ. ಕಳೆದ ಬಾರಿ ಗೆದ್ದ ವಾರ್ಡ್ ನಲ್ಲಿ ಮೀಸಲಾತಿ ಬದಲಾಗಿರುವ ಕಾರಣ ಅಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಆದುದರಿಂದ ಬೋರುಗುಡ್ಡೆ ವಾರ್ಡ್ ನಿಂದ ಸ್ಪರ್ಧೆ ಮಾಡುವುದಾಗಿ ಉಮ್ಮರ್ ಹೇಳಿದ್ದಾರೆ. ಅಭ್ಯರ್ಥಿ ಗಳ ಘೋಷಣೆ ಆಗುವ ಸಂದರ್ಭದಲ್ಲಿ ಅವರು ಎಸ್.ಡಿ.ಪಿ.ಐ ಪಟ್ಟಿಯಲ್ಲಿ ಇರುತ್ತಾರಾ ಅಥವಾ ಪಕ್ಷೇತರನಾಗಿ ಕಣದಲ್ಲಿ ಇರುತ್ತಾರಾ ಎಂಬುದು ಸದ್ಯದ ಕುತೂಹಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಮ್ಮರ್ ಪಕ್ಷದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಯುಕ್ತಿಕ ಕಾರಣಗಳಿಗಾಗಿ ರಜೆ ಪಡೆದ ಕಾರಣ ಪಕ್ಷದ ಚಟುವಟಿಕೆಗಳಿಂದ ಅವರು ದೂರ ಉಳಿದಿದ್ದರು ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

8 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

17 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

17 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago