Advertisement
Political mirror

ಸುಳ್ಯ ನ.ಪಂ.ಚುನಾವಣೆ: ಎಸ್.ಡಿ.ಪಿ.ಐ. 9 ವಾರ್ಡ್ ಗಳಲ್ಲಿ ಸ್ಪರ್ಧೆ.

Share

# ಸ್ಪೆಶಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ

 

ಸುಳ್ಯ : ಮೇ.29 ರಂದು ನಡೆಯುವ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಪೈಪೋಟಿ ನೀಡಲು ಎಸ್.ಡಿ.ಪಿ‌.ಐ ಪಕ್ಷ ಕೂಡ ಸಿದ್ಧತೆ ನಡೆಸಿದ್ದು. ಇದರಿಂದ ಚುನಾವಣೆ ಗೆ ತ್ರಿಕೋನ ಸ್ಪರ್ಧೆಯ ರಂಗು ತರಲಿದೆ.

20 ವಾರ್ಡ್ ಗಳಲ್ಲಿ ಒಂಭತ್ತು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಿದೆ. ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿ ಸಿದ್ಧಗೊಂಡಿದೆ. ಪಕ್ಷದ ನಗರ ಅಧ್ಯಕ್ಷ ಅಬ್ದುಲ್ ಕಲಾಂ, ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ.ಕೆ‌.ಮುಸ್ತಫಾ, ನಗರ ಕಾರ್ಯದರ್ಶಿ ಮುಸ್ತಫಾ ಚೆಂಗಳ ಮತ್ತಿತರ ಪ್ರಮುಖರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ಎಸ್.ಡಿ.ಪಿ.ಐ ಖಾತೆ ತೆರೆದಿತ್ತು. ಈ ಬಾರಿ ಇನ್ನಷ್ಟು ಕ್ಷೇತ್ರಗಳಲ್ಲಿ ಬಿರುಸಿನ ಸ್ಪರ್ಧೆ ನೀಡುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಮ್ಮರ್ ಸ್ಪರ್ಧೆ ಕುತೂಹಲ:

ಕಳೆದ ಚುನಾವಣೆ ಯಲ್ಲಿ 14ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೆ.ಎಸ್.ಉಮ್ಮರ್ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವುದು ಕುತೂಹಲ ಕೆರಳಿಸಿದೆ. ಕಳೆದ ಬಾರಿ ಗೆದ್ದ ವಾರ್ಡ್ ನಲ್ಲಿ ಮೀಸಲಾತಿ ಬದಲಾಗಿರುವ ಕಾರಣ ಅಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಆದುದರಿಂದ ಬೋರುಗುಡ್ಡೆ ವಾರ್ಡ್ ನಿಂದ ಸ್ಪರ್ಧೆ ಮಾಡುವುದಾಗಿ ಉಮ್ಮರ್ ಹೇಳಿದ್ದಾರೆ. ಅಭ್ಯರ್ಥಿ ಗಳ ಘೋಷಣೆ ಆಗುವ ಸಂದರ್ಭದಲ್ಲಿ ಅವರು ಎಸ್.ಡಿ.ಪಿ.ಐ ಪಟ್ಟಿಯಲ್ಲಿ ಇರುತ್ತಾರಾ ಅಥವಾ ಪಕ್ಷೇತರನಾಗಿ ಕಣದಲ್ಲಿ ಇರುತ್ತಾರಾ ಎಂಬುದು ಸದ್ಯದ ಕುತೂಹಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಮ್ಮರ್ ಪಕ್ಷದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ವೈಯುಕ್ತಿಕ ಕಾರಣಗಳಿಗಾಗಿ ರಜೆ ಪಡೆದ ಕಾರಣ ಪಕ್ಷದ ಚಟುವಟಿಕೆಗಳಿಂದ ಅವರು ದೂರ ಉಳಿದಿದ್ದರು ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

10 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

15 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago