Advertisement
ನಮ್ಮೂರ ಸುದ್ದಿ

ನ.ಪಂ.ಚುನಾವಣೆಗೆ ಸಿದ್ಧತೆ ಪೂರ್ಣ : ಮೂರು ಅತಿಸೂಕ್ಷ್ಮ ಮತಗಟ್ಟೆಗಳು

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಇಂದು ಮತದಾನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ. 20 ಮತಗಟ್ಟೆಗಳ ಪೈಕಿ ಮೂರು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ.

ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಿಂದ ನಿನ್ನೆ ಮಧ್ಯಾಹ್ನದ ವೇಳೆಗೆ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇವಿಎಂ ಮತ್ತು ಇತರ ಸಾಮಾಗ್ರಿಗಳೊಂದಿಗೆ ಮತಗಟ್ಟೆ ಕಡೆಗೆ ತೆರಳಿದರು. ಅಧ್ಯಕ್ಷ ಮತಗಟ್ಟೆ ಅಧಿಕಾರಿ, ಮೂರು ಮಂದಿ ಮತಗಟ್ಟೆ ಅಧಿಕಾರಿಗಳು, ಓರ್ವ ಡಿಗ್ರೂಪ್ ಸಿಬ್ಬಂದಿ ಸೇರಿ ಐದು ಮಂದಿ ಹಾಗು ಮೂರು ಮಂದಿ ಭದ್ರತಾ ಸಿಬ್ಬಂದಿಗಳನ್ನು ಪ್ರತಿ ಮತಗಟ್ಟೆಗೆ ನಿಯೋಜನೆ ಮಾಡಲಾಗಿದೆ. ಬೆಳಿಗ್ಗೆ ಏಳರಿಂದ ಸಂಜೆ ಐದರ ತನಕ ಮತದಾನ ನಡೆಯಲಿದೆ.

 

20 ವಾರ್ಡ್‍ಗಳಲ್ಲಿರುವ 6,928 ಪುರುಷ ಮತ್ತು 7,165 ಮಹಿಳೆಯರು ಸೇರಿ ಒಟ್ಟು 14,093 ಮತದಾರರು 53 ಮಂದಿ ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ವಾರ್ಡ್ ಸಂಖ್ಯೆ 14(ಕಲ್ಲುಮುಟ್ಲು), 15(ನಾವೂರು), 16(ಕಾಯರ್ತೋಡಿ) ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ. ಇಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗುವುದು.

ನಗರ ಪಂಚಾಯತ್ ಚುನಾವಣೆಯಲ್ಲಿ ಮತ ಯಂತ್ರದ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಈ ಚುನಾವಣೆಯಲ್ಲಿ ಇರುವುದಿಲ್ಲ. 20 ಮತಗಟ್ಟೆಗಳಿಗಾಗಿ 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ.

ಪೊಲೀಸ್ ಇಲಾಖೆಯೂ ಸಿದ್ಧ:
ಸುಳ್ಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಚುನಾವಣೆಗೆ ಭದ್ರತಾ ವ್ಯವಸ್ಥೆಯನ್ನು ಮಾಡಿದೆ. ಮೂರು ಮಂದಿ ಉಪನಿರೀಕ್ಷಕರು, ಆರು ಮಂದಿ ಎಎಸ್‍ಐ, 15 ಮಂದಿ ಹೆಡ್ ಕಾನ್ಸೇಟಬಲ್ಸ್, 27 ಮಂದಿ ಪೊಲೀಸ್ ಸಿಬ್ಬಂದಿಗಳು, 27 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮಸ್ಟರಿಂಗ್ ಕೇಂದ್ರವಾದ ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ಚುನಾವಣೆಗೆ ನಿಯೋಜನೆಗೊಂಡ ಪೊಲೀಸರಿಗೆ ಮಾಹಿತಿ ಮತ್ತು ಸೂಚನೆಗಳನ್ನು ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

12 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

20 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

21 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

22 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago