Advertisement
ನಮ್ಮೂರ ಸುದ್ದಿ

ನ.ಪಂ.ಚುನಾವಣೆಗೆ ಸಿದ್ಧತೆ ಪೂರ್ಣ : ಮೂರು ಅತಿಸೂಕ್ಷ್ಮ ಮತಗಟ್ಟೆಗಳು

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಇಂದು ಮತದಾನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ. 20 ಮತಗಟ್ಟೆಗಳ ಪೈಕಿ ಮೂರು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ.

ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಿಂದ ನಿನ್ನೆ ಮಧ್ಯಾಹ್ನದ ವೇಳೆಗೆ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇವಿಎಂ ಮತ್ತು ಇತರ ಸಾಮಾಗ್ರಿಗಳೊಂದಿಗೆ ಮತಗಟ್ಟೆ ಕಡೆಗೆ ತೆರಳಿದರು. ಅಧ್ಯಕ್ಷ ಮತಗಟ್ಟೆ ಅಧಿಕಾರಿ, ಮೂರು ಮಂದಿ ಮತಗಟ್ಟೆ ಅಧಿಕಾರಿಗಳು, ಓರ್ವ ಡಿಗ್ರೂಪ್ ಸಿಬ್ಬಂದಿ ಸೇರಿ ಐದು ಮಂದಿ ಹಾಗು ಮೂರು ಮಂದಿ ಭದ್ರತಾ ಸಿಬ್ಬಂದಿಗಳನ್ನು ಪ್ರತಿ ಮತಗಟ್ಟೆಗೆ ನಿಯೋಜನೆ ಮಾಡಲಾಗಿದೆ. ಬೆಳಿಗ್ಗೆ ಏಳರಿಂದ ಸಂಜೆ ಐದರ ತನಕ ಮತದಾನ ನಡೆಯಲಿದೆ.

 

20 ವಾರ್ಡ್‍ಗಳಲ್ಲಿರುವ 6,928 ಪುರುಷ ಮತ್ತು 7,165 ಮಹಿಳೆಯರು ಸೇರಿ ಒಟ್ಟು 14,093 ಮತದಾರರು 53 ಮಂದಿ ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ವಾರ್ಡ್ ಸಂಖ್ಯೆ 14(ಕಲ್ಲುಮುಟ್ಲು), 15(ನಾವೂರು), 16(ಕಾಯರ್ತೋಡಿ) ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ. ಇಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗುವುದು.

ನಗರ ಪಂಚಾಯತ್ ಚುನಾವಣೆಯಲ್ಲಿ ಮತ ಯಂತ್ರದ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಈ ಚುನಾವಣೆಯಲ್ಲಿ ಇರುವುದಿಲ್ಲ. 20 ಮತಗಟ್ಟೆಗಳಿಗಾಗಿ 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ.

ಪೊಲೀಸ್ ಇಲಾಖೆಯೂ ಸಿದ್ಧ:
ಸುಳ್ಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಚುನಾವಣೆಗೆ ಭದ್ರತಾ ವ್ಯವಸ್ಥೆಯನ್ನು ಮಾಡಿದೆ. ಮೂರು ಮಂದಿ ಉಪನಿರೀಕ್ಷಕರು, ಆರು ಮಂದಿ ಎಎಸ್‍ಐ, 15 ಮಂದಿ ಹೆಡ್ ಕಾನ್ಸೇಟಬಲ್ಸ್, 27 ಮಂದಿ ಪೊಲೀಸ್ ಸಿಬ್ಬಂದಿಗಳು, 27 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮಸ್ಟರಿಂಗ್ ಕೇಂದ್ರವಾದ ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ಚುನಾವಣೆಗೆ ನಿಯೋಜನೆಗೊಂಡ ಪೊಲೀಸರಿಗೆ ಮಾಹಿತಿ ಮತ್ತು ಸೂಚನೆಗಳನ್ನು ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

4 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

21 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago