ನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

May 21, 2019
3:05 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಂಗಳವಾರ ನಡೆಯಿತು.

ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗು ನ.ಪಂ.ಅಭ್ಯರ್ಥಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಬಿಡುಗಡೆ ‌ಮಾಡಿದರು. ನಗರಕ್ಕೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುವುದು. ಇದಕ್ಕಾಗಿ ಪಯಸ್ವಿನಿ ನದಿಗೆ ವೆಂಟೆಡ್ ಡ್ಯಾಂ ನಿರ್ಮಿಸಿ ಶಾಶ್ವತ ಯೋಜನೆ ರೂಪಿಸಲಾಗುವುದು. ನಗರದಲ್ಲಿ ಒಳಚರಂಡಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುವುದು. ಪಯಸ್ವಿನಿ ನದಿಗೆ ನಗರದ ಕೊಳಚೆ ನೀರು ಹರಿಯವುದನ್ನು ತಡೆದು. ಕೊಳಚೆ ನೀರು ಒಳಚರಂಡಿಯಲ್ಲಿ ಹರಿಯುವಂತೆ ಮಾಡಲಾಗುವುದು. ಕಸ ವಿಲೇವಾರಿಗೆ ಶಾಶ್ವತ ಯೋಜನೆ ರೂಪಿಸಲಾಗುವುದು. ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿವೇಶನ ಒದಗಿಸಲಾಗುವುದು.‌ ಸುಳ್ಯ ನಗರದ ವಿದ್ಯುತ್ ಸಮಸ್ಯೆ ಪರಿಹರಿಸಲು 110 ಕೆ.ವಿ.ವಿದ್ಯುತ್ ಲೈನ್ ಅತೀ ತುರ್ತಾಗಿ ಅನುಷ್ಠಾನ ಮಾಡಲಾಗುವುದು. ರಾಜ್ಯ ಸರಕಾರದಿಂದ ವಿಶೇಷ ಅನುದಾನ ತಂದು ನಗರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ನಡೆಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಮುಖಂಡರು ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳ ಪರಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಕಳೆದ 15 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ನಗರದ ಅಭಿವೃದ್ಧಿಗೆ ಮತ್ತು ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಅವರು ಆರೋಪಿಸಿದರು.

ನ.ಪಂ.ಅಭ್ಯರ್ಥಿ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಮುಖಂಡರಾದ ಎಸ್.ಸಂಶುದ್ದೀನ್, ನಂದರಾಜ ಸಂಕೇಶ್, ಲಕ್ಷ್ಮಣ ಶೆಣೈ, ಇಬ್ರಾಹಿಂ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror