Advertisement
ನಮ್ಮೂರ ಸುದ್ದಿ

ನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಂಗಳವಾರ ನಡೆಯಿತು.

Advertisement

ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗು ನ.ಪಂ.ಅಭ್ಯರ್ಥಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಬಿಡುಗಡೆ ‌ಮಾಡಿದರು. ನಗರಕ್ಕೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುವುದು. ಇದಕ್ಕಾಗಿ ಪಯಸ್ವಿನಿ ನದಿಗೆ ವೆಂಟೆಡ್ ಡ್ಯಾಂ ನಿರ್ಮಿಸಿ ಶಾಶ್ವತ ಯೋಜನೆ ರೂಪಿಸಲಾಗುವುದು. ನಗರದಲ್ಲಿ ಒಳಚರಂಡಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುವುದು. ಪಯಸ್ವಿನಿ ನದಿಗೆ ನಗರದ ಕೊಳಚೆ ನೀರು ಹರಿಯವುದನ್ನು ತಡೆದು. ಕೊಳಚೆ ನೀರು ಒಳಚರಂಡಿಯಲ್ಲಿ ಹರಿಯುವಂತೆ ಮಾಡಲಾಗುವುದು. ಕಸ ವಿಲೇವಾರಿಗೆ ಶಾಶ್ವತ ಯೋಜನೆ ರೂಪಿಸಲಾಗುವುದು. ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿವೇಶನ ಒದಗಿಸಲಾಗುವುದು.‌ ಸುಳ್ಯ ನಗರದ ವಿದ್ಯುತ್ ಸಮಸ್ಯೆ ಪರಿಹರಿಸಲು 110 ಕೆ.ವಿ.ವಿದ್ಯುತ್ ಲೈನ್ ಅತೀ ತುರ್ತಾಗಿ ಅನುಷ್ಠಾನ ಮಾಡಲಾಗುವುದು. ರಾಜ್ಯ ಸರಕಾರದಿಂದ ವಿಶೇಷ ಅನುದಾನ ತಂದು ನಗರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ನಡೆಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಮುಖಂಡರು ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳ ಪರಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಕಳೆದ 15 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ನಗರದ ಅಭಿವೃದ್ಧಿಗೆ ಮತ್ತು ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಅವರು ಆರೋಪಿಸಿದರು.

ನ.ಪಂ.ಅಭ್ಯರ್ಥಿ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಮುಖಂಡರಾದ ಎಸ್.ಸಂಶುದ್ದೀನ್, ನಂದರಾಜ ಸಂಕೇಶ್, ಲಕ್ಷ್ಮಣ ಶೆಣೈ, ಇಬ್ರಾಹಿಂ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

7 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

13 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

17 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

17 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

17 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago