Advertisement
ನಮ್ಮೂರ ಸುದ್ದಿ

ನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಂಗಳವಾರ ನಡೆಯಿತು.

ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗು ನ.ಪಂ.ಅಭ್ಯರ್ಥಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಬಿಡುಗಡೆ ‌ಮಾಡಿದರು. ನಗರಕ್ಕೆ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುವುದು. ಇದಕ್ಕಾಗಿ ಪಯಸ್ವಿನಿ ನದಿಗೆ ವೆಂಟೆಡ್ ಡ್ಯಾಂ ನಿರ್ಮಿಸಿ ಶಾಶ್ವತ ಯೋಜನೆ ರೂಪಿಸಲಾಗುವುದು. ನಗರದಲ್ಲಿ ಒಳಚರಂಡಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುವುದು. ಪಯಸ್ವಿನಿ ನದಿಗೆ ನಗರದ ಕೊಳಚೆ ನೀರು ಹರಿಯವುದನ್ನು ತಡೆದು. ಕೊಳಚೆ ನೀರು ಒಳಚರಂಡಿಯಲ್ಲಿ ಹರಿಯುವಂತೆ ಮಾಡಲಾಗುವುದು. ಕಸ ವಿಲೇವಾರಿಗೆ ಶಾಶ್ವತ ಯೋಜನೆ ರೂಪಿಸಲಾಗುವುದು. ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿವೇಶನ ಒದಗಿಸಲಾಗುವುದು.‌ ಸುಳ್ಯ ನಗರದ ವಿದ್ಯುತ್ ಸಮಸ್ಯೆ ಪರಿಹರಿಸಲು 110 ಕೆ.ವಿ.ವಿದ್ಯುತ್ ಲೈನ್ ಅತೀ ತುರ್ತಾಗಿ ಅನುಷ್ಠಾನ ಮಾಡಲಾಗುವುದು. ರಾಜ್ಯ ಸರಕಾರದಿಂದ ವಿಶೇಷ ಅನುದಾನ ತಂದು ನಗರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ನಡೆಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಮುಖಂಡರು ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳ ಪರಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಕಳೆದ 15 ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ನಗರದ ಅಭಿವೃದ್ಧಿಗೆ ಮತ್ತು ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಅವರು ಆರೋಪಿಸಿದರು.

ನ.ಪಂ.ಅಭ್ಯರ್ಥಿ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಮುಖಂಡರಾದ ಎಸ್.ಸಂಶುದ್ದೀನ್, ನಂದರಾಜ ಸಂಕೇಶ್, ಲಕ್ಷ್ಮಣ ಶೆಣೈ, ಇಬ್ರಾಹಿಂ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

2 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago