ನ.ಪಂ ಚುನಾವಣೆ : ಕಾಂಗ್ರೆಸ್ ಟಿಕೆಟ್ ನಿರಾಕರಣೆ : ಸ್ಫೋಟಗೊಂಡ ಭಿನ್ನಮತ : ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ

May 15, 2019
11:54 PM

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ ಅಂತಿಮಗೊಳ್ಳುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಆರ್.ಕೆ.ಮಹಮ್ಮದ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಬೋರುಗುಡ್ಡೆ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ “ಸುಳ್ಯನ್ಯೂಸ್.ಕಾಂ” ಗೆ   ತಿಳಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಇದೀಗ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ‘ಸುಳ್ಯನ್ಯೂಸ್. ಕಾಂ ಗೆ ತಿಳಿಸಿದ್ದಾರೆ.

ನಗರ ಪಂಚಾಯತ್ ನ ಕಳೆದ ಮೂರು ಚುನಾವಣೆಯಲ್ಲೂ ಅಭ್ಯರ್ಥಿತನಕ್ಕೆ ಇವರ ಹೆಸರು ಕೇಳಿ ಬಂದಿತ್ತು. ಆದರೆ ಅವಕಾಶ ದೊರೆಯಲಿಲ್ಲ. ಈ ಹಿಂದೆ ಎರಡು ಬಾರಿ ಇವರು ನ.ಪಂ.ಚುನಾವಣೆಗೆ ನಾಮಪತ್ರವನ್ನೂ ಸಲ್ಲಿಸಿದ್ದರು. ಆದರೆ ಪಕ್ಷದ ಒತ್ತಡಕ್ಕೆ ಮಣಿದು ಹಿಂಪಡೆದಿದ್ದರು.

ಈ ಮಧ್ಯೆ ನಾವೂರು ವಾರ್ಡ್ ನ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಅವರು ಕೂಡಾ ಪಕ್ಷದಿಂದ ಟಿಕೆಟ್ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror