Advertisement
Political mirror

ನ.ಪಂ ಚುನಾವಣೆ : ಕಾಂಗ್ರೆಸ್ ಟಿಕೆಟ್ ನಿರಾಕರಣೆ : ಸ್ಫೋಟಗೊಂಡ ಭಿನ್ನಮತ : ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ ಅಂತಿಮಗೊಳ್ಳುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಆರ್.ಕೆ.ಮಹಮ್ಮದ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಬೋರುಗುಡ್ಡೆ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ “ಸುಳ್ಯನ್ಯೂಸ್.ಕಾಂ” ಗೆ   ತಿಳಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಇದೀಗ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ‘ಸುಳ್ಯನ್ಯೂಸ್. ಕಾಂ ಗೆ ತಿಳಿಸಿದ್ದಾರೆ.

ನಗರ ಪಂಚಾಯತ್ ನ ಕಳೆದ ಮೂರು ಚುನಾವಣೆಯಲ್ಲೂ ಅಭ್ಯರ್ಥಿತನಕ್ಕೆ ಇವರ ಹೆಸರು ಕೇಳಿ ಬಂದಿತ್ತು. ಆದರೆ ಅವಕಾಶ ದೊರೆಯಲಿಲ್ಲ. ಈ ಹಿಂದೆ ಎರಡು ಬಾರಿ ಇವರು ನ.ಪಂ.ಚುನಾವಣೆಗೆ ನಾಮಪತ್ರವನ್ನೂ ಸಲ್ಲಿಸಿದ್ದರು. ಆದರೆ ಪಕ್ಷದ ಒತ್ತಡಕ್ಕೆ ಮಣಿದು ಹಿಂಪಡೆದಿದ್ದರು.

ಈ ಮಧ್ಯೆ ನಾವೂರು ವಾರ್ಡ್ ನ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಅವರು ಕೂಡಾ ಪಕ್ಷದಿಂದ ಟಿಕೆಟ್ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

4 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

10 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago