Advertisement
Political mirror

ನ.ಪಂ ಚುನಾವಣೆ : ಕಾಂಗ್ರೆಸ್ ಟಿಕೆಟ್ ನಿರಾಕರಣೆ : ಸ್ಫೋಟಗೊಂಡ ಭಿನ್ನಮತ : ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ ಅಂತಿಮಗೊಳ್ಳುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಆರ್.ಕೆ.ಮಹಮ್ಮದ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಬೋರುಗುಡ್ಡೆ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ “ಸುಳ್ಯನ್ಯೂಸ್.ಕಾಂ” ಗೆ   ತಿಳಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಇದೀಗ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ‘ಸುಳ್ಯನ್ಯೂಸ್. ಕಾಂ ಗೆ ತಿಳಿಸಿದ್ದಾರೆ.

ನಗರ ಪಂಚಾಯತ್ ನ ಕಳೆದ ಮೂರು ಚುನಾವಣೆಯಲ್ಲೂ ಅಭ್ಯರ್ಥಿತನಕ್ಕೆ ಇವರ ಹೆಸರು ಕೇಳಿ ಬಂದಿತ್ತು. ಆದರೆ ಅವಕಾಶ ದೊರೆಯಲಿಲ್ಲ. ಈ ಹಿಂದೆ ಎರಡು ಬಾರಿ ಇವರು ನ.ಪಂ.ಚುನಾವಣೆಗೆ ನಾಮಪತ್ರವನ್ನೂ ಸಲ್ಲಿಸಿದ್ದರು. ಆದರೆ ಪಕ್ಷದ ಒತ್ತಡಕ್ಕೆ ಮಣಿದು ಹಿಂಪಡೆದಿದ್ದರು.

ಈ ಮಧ್ಯೆ ನಾವೂರು ವಾರ್ಡ್ ನ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಅವರು ಕೂಡಾ ಪಕ್ಷದಿಂದ ಟಿಕೆಟ್ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago