Advertisement
Political mirror

ನ ಪಂ ಚುನಾವಣೆ : ಅತೃಪ್ತ ಕಾಂಗ್ರೆಸ್ಸಿಗರು ಪ್ರತ್ಯೇಕ ಸಭೆ ನಡೆಸಲು ನಿರ್ಧಾರ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಅಭ್ಯರ್ಥಿ ಘೋಷಣೆ ಆದ ಬಳಿಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ನ ಆರ್.ಕೆ.ಮಹಮ್ಮದ್ ಗೆ ಸೀಟ್ ನಿರಾಕರಣೆಯ ಹಿನ್ನಲೆಯಲ್ಲಿ ಅತೃಪ್ತರಾದ ಕಾಂಗ್ರೆಸ್ ನ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement

ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಪದಾಧಿಕಾರಿಯೋರ್ವರ ನೇತೃತ್ವದಲ್ಲಿ ಮೇ.20 ರಂದು ನಡೆಯುವ ಸಭೆಯ ಬಳಿಕ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಸಭೆಯಲ್ಲಿ ಬೋರುಗುಡ್ಡೆ, ನಾವೂರು, ಕೆರೆಮೂಲೆ, ಕಲ್ಲುಮುಟ್ಲು ವಾರ್ಡ್ ಗಳ ಅತೃಪ್ತ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಬೋರುಗುಡ್ಡೆ ವಾರ್ಡ್ ನಲ್ಲಿ ಆರ್.ಕೆ.ಮಹಮ್ಮದ್ ಗೇ ಸೀಟ್ ನೀಡಬೇಕು ಎಂದು ಕಾಂಗ್ರೆಸ್ ನ ಒಂದು ಗುಂಪು ಪ್ರಬಲವಾದ ಬೇಡಿಕೆಯನ್ನಿಟ್ಟಿದ್ದರು. ಅಭ್ಯರ್ಥಿತನಕ್ಕೆ ಕೊನೆಯವರೆಗೆ ರೇಸ್ ನಲ್ಲಿದ್ದ ಆರ್.ಕೆ. ಹೆಸರು ಒಂದು ಹಂತದಲ್ಲಿ ಬಹುತೇಕ ಅಂತಿಮಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಇವರಿಗೆ ಸೀಟ್ ಕೈ ತಪ್ಪಿತ್ತು. ಇದರಿಂದ ಅಸಮಾಧಾನಗೊಂಡ ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿ ಸಡ್ಡು ಹೊಡೆದಿದ್ದಾರೆ. ಇದೀಗ ಆರ್.ಕೆ ಪರ ಬ್ಯಾಟಿಂಗ್ ಮಾಡುತ್ತಿರುವ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

48 mins ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

1 hour ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

2 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

11 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

12 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago