ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಅಭ್ಯರ್ಥಿ ಘೋಷಣೆ ಆದ ಬಳಿಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ನ ಆರ್.ಕೆ.ಮಹಮ್ಮದ್ ಗೆ ಸೀಟ್ ನಿರಾಕರಣೆಯ ಹಿನ್ನಲೆಯಲ್ಲಿ ಅತೃಪ್ತರಾದ ಕಾಂಗ್ರೆಸ್ ನ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಪದಾಧಿಕಾರಿಯೋರ್ವರ ನೇತೃತ್ವದಲ್ಲಿ ಮೇ.20 ರಂದು ನಡೆಯುವ ಸಭೆಯ ಬಳಿಕ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಸಭೆಯಲ್ಲಿ ಬೋರುಗುಡ್ಡೆ, ನಾವೂರು, ಕೆರೆಮೂಲೆ, ಕಲ್ಲುಮುಟ್ಲು ವಾರ್ಡ್ ಗಳ ಅತೃಪ್ತ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಬೋರುಗುಡ್ಡೆ ವಾರ್ಡ್ ನಲ್ಲಿ ಆರ್.ಕೆ.ಮಹಮ್ಮದ್ ಗೇ ಸೀಟ್ ನೀಡಬೇಕು ಎಂದು ಕಾಂಗ್ರೆಸ್ ನ ಒಂದು ಗುಂಪು ಪ್ರಬಲವಾದ ಬೇಡಿಕೆಯನ್ನಿಟ್ಟಿದ್ದರು. ಅಭ್ಯರ್ಥಿತನಕ್ಕೆ ಕೊನೆಯವರೆಗೆ ರೇಸ್ ನಲ್ಲಿದ್ದ ಆರ್.ಕೆ. ಹೆಸರು ಒಂದು ಹಂತದಲ್ಲಿ ಬಹುತೇಕ ಅಂತಿಮಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಇವರಿಗೆ ಸೀಟ್ ಕೈ ತಪ್ಪಿತ್ತು. ಇದರಿಂದ ಅಸಮಾಧಾನಗೊಂಡ ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿ ಸಡ್ಡು ಹೊಡೆದಿದ್ದಾರೆ. ಇದೀಗ ಆರ್.ಕೆ ಪರ ಬ್ಯಾಟಿಂಗ್ ಮಾಡುತ್ತಿರುವ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…