ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆ ನಗರದಲ್ಲಿ ಚುನಾವಣಾ ಬಹಿಷ್ಕಾರದ ಕೂಗು ಕೇಳಿ ಬಂದಿದೆ.ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ನ.ಪಂ.ಚುನಾವಣೆ ಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಬ್ಯಾನರ್ ಅಳವಡಿಸಿದ್ದಾರೆ.
ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣ ನಿರ್ಮಾಣಕ್ಕಾಗಿ ಹಲವು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಇರುವ ನಿಲ್ದಾಣವನ್ನು ಸುಸಜ್ಜಿತವಾಗಿ ಮಾಡಿ ಅದಕ್ಕೆ ನಾಮಫಲಕ ಅಳವಡಿಸಬೇಕು. ಖಾಸಗೀ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ನಗರದ ವಿವಿದೆಡೆ ಟೂರಿಸ್ಟ್ ವಾಹನಗಳಿಗೆ ತಂಗಲು ಸುಸಜ್ಜಿತ ವ್ಯವಸ್ಥೆ ಮಾಡಬೇಕು ಎಂಬುದು ನಮ್ಮ ಬೇಡಿಕೆ. ಈ ಬೇಡಿಕೆ ಈಡೇರದ ಕಾರಣ ಟೂರಿಸ್ಟ್ ಚಾಲಕ, ಮಾಲಕರು ಮತ್ತು ಅವರ ಕುಟುಂಬದವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…