Advertisement
ಸುದ್ದಿಗಳು

ನ ಪಂ ಚುನಾವಣೆ : 65 ನಾಮಪತ್ರ ಸ್ವೀಕೃತ : ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಕಾಯ್ದಿರಿಸಿದ ಚುನಾವಣಾಧಿಕಾರಿ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಪೂರ್ತಿಗೊಂಡಿದೆ. ಸಲ್ಲಿಕೆಯಾದ 66 ನಾಮಪತ್ರಗಳಲ್ಲಿ 65 ನಾಮಪತ್ರಗಳು ಕ್ರಮಬದ್ಧ ವಾಗಿದ್ದು ಸ್ವೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಕೆ.ಸಿ‌.ಸುನಿಲ್ ಕುಮಾರ್ ಅವರ ನಾಮಪತ್ರದ ಕುರಿತ ನಿರ್ಧಾರವನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ವಾರ್ಡ್ ಸಂಖ್ಯೆ 1-10 ರವರೆಗೆ ವಾರ್ಡ್ ಗಳಲ್ಲಿ ಒಟ್ಟು 28 ನಾಮಪತ್ರಗಳ ಪರಿಶೀಲನೆಯನ್ನು ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ನಡೆದು 27 ನಾಮಪತ್ರಗಳನ್ನು ಸ್ವೀಕರಿಸಿ ಒಂದು ನಾಮಪತ್ರದ ಕುರಿತ ನಿರ್ಧಾರವನ್ನು ನಾಳೆ 11 ಗಂಟೆಗೆ ಮುಂದೂಡಲಾಗಿದೆ.

ವಾರ್ಡ್ ಸಂಖ್ಯೆ 11-20ರವರೆಗೆ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಚುನಾವಣಾಧಿಕಾರಿ ಎನ್. ಮಂಜುನಾಥ್ ನೇತೃತ್ವದಲ್ಲಿ ನಡೆದು ಸಲ್ಲಿಕೆಯಾದ ಎಲ್ಲಾ 38 ನಾಮಪತ್ರಗಳು ಸ್ವೀಕರಿಸಲಾಗಿದೆ.

ಕಾಯ್ದಿರಿಸಿದ ಪಕ್ಷೇತರ ಅಭ್ಯರ್ಥಿಯ ನಾಮಪತ್ರ :

10ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಸಿ.ಸುನಿಲ್ ಕುಮಾರ್ ಅವರು ಸಲ್ಲಿಸಿದ ನಾಮಪತ್ರದ ಕುರಿತ ನಿರ್ಧಾರವನ್ನು ಚುನಾವಣಾಧಿಕಾರಿಕಾರಿಗಳು ನಾಳೆಗೆ ಮುಂದೂಡಿದ್ದಾರೆ.

ಮತದಾರ ಪಟ್ಟಿಯ ಕ್ರಮ ಸಂಖ್ಯೆ ಸಂಬಂಧಪಟ್ಟು ದೃಢೀಕರಣ ಪತ್ರವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿ ಸುನಿಲ್ ಕುಮಾರ್ ಗೆ ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

1 hour ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

7 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

7 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

13 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

14 hours ago