Advertisement
ಸುದ್ದಿಗಳು

ನ.ಪಂ.ಚುನಾವಣೆ: ನಾಳೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಸಿದ್ಧ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆಗೆ ಸಿದ್ಧವಾಗಲಿದೆ.
ಪ್ರತಿ ವಾರ್ಡ್ ಗಳಲ್ಲಿಯೂ ಕಾರ್ಯಕರ್ತರ ಸಭೆ ನಡೆಸಿ ಅಲ್ಲಿ ಸೂಚಿಸಲ್ಪಟ್ಟ ಅಭ್ಯರ್ಥಿ ಗಳ ಪಟ್ಟಿಯನ್ನು ತಯಾರಿಸಿ ಮಂಡಲ ಸಮಿತಿಗೆ ಕಳಿಸಲಾಗಿದೆ. ಮಂಡಲ ಸಮಿತಿಯ ಪ್ರಮುಖರನ್ನೊಳಗೊಂಡ ಚುನಾವಣಾ ನಿರ್ವಹಣಾ ಸಮಿತಿ ಮತ್ತು ನಗರ ಶಕ್ತಿ ಕೇಂದ್ರದ ಪದಾಧಿಕಾರಿಗಳು ಪಟ್ಟಿಯನ್ನು ಪರಿಶೀಲನೆ ನಡೆಸಿ ಅಳೆದು ತೂಗಿ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು. ಒಬ್ಬರೇ ಆಕಾಂಕ್ಷಿ ಇರುವ ಕಡೆ, ಮೀಸಲು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆ ಬಹುತೇಕ ಅಂತಿಮಗೊಳಿಸಲಾಗಿದೆ. 3-4 ಹೆಸರುಗಳು ಇರುವ ಕಡೆ ಅಭ್ಯರ್ಥಿಯ ಆಯ್ಕೆಯ ಚರ್ಚೆ ನಡೆಯುತಿದೆ. ಶನಿವಾರ ಸಂಜೆಯ ವೇಳೆಗೆ ಬಹುತೇಕ ಪಟ್ಟಿ ಸಿದ್ಧಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಸೋಮವಾರದಿಂದ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಕೆಲವೆಡೆ ಆಕಾಂಕ್ಷಿಗಳ ಸಾಲು ಉದ್ದ ಇದ್ದು ಅಭ್ಯರ್ಥಿಯನ್ನು ಅಂತಿಮಗೊಳಿಸಲು ಮ್ಯಾರಥಾನ್ ಚರ್ಚೆ ನಡೆಯುತ್ತಿದೆ. ಬಹುತೇಕ ವಾರ್ಡ್ ಗಳಲ್ಲಿ ಮೂರು ಮತ್ತು ನಾಲ್ಕು ಹೆಸರುಗಳು ಸೂಚಿಸಲ್ಪಟ್ಟಿದೆ. ನಗರ ಪಂಚಾಯತ್ ನ ಸಾಮಾನ್ಯ ಮಹಿಳಾ ವಾರ್ಡ್ ಒಂದರಲ್ಲಿ 8 ಮಂದಿ ಆಕಾಂಕ್ಷಿಗಳಿರುವುದು ಕುತೂಹಲ ಕೆರಳಿಸಿದೆ.

ಶೇ. 100 ರಷ್ಟು ಹೊಸ ಮುಖಗಳ ಆಯ್ಕೆಗೆ ಬಿಜೆಪಿ ನೇತೃತ್ವ ಒತ್ತು ನೀಡಿದೆ. ಹಳೆಯ ಎಲ್ಲಾ ಸದಸ್ಯರನ್ನೂ ಬದಲಿಸಿ ನಗರ ಪಂಚಾಯತ್ ನ 20 ವಾರ್ಡ್ ಗಳಲ್ಲಿಯೂ ಹೊಸ ಅಭ್ಯರ್ಥಿ ಆಯ್ಕೆಗೆ ಪ್ರಯತ್ನ ನಡೆಸುತ್ತಿರುವುದಾಗಿ ಮುಖಂಡರು ತಿಳಿಸಿದ್ದಾರೆ. ಆದರೆ ಕೆಲವು ಮಂದಿ ಮಾಜಿ ಸದಸ್ಯರು ಟಿಕೆಟ್ ಬೇಡಿಕೆ ಮುಂದಿಟ್ಟಿರುವುದಾಗಿ ತಿಳಿದು ಬಂದಿದೆ. ಇದರಿಂದ ಕೊನೆಯ ಕ್ಷಣದಲ್ಲಿ ಒಂದೆರಡು ಮಂದಿ ಹಳೆಯ ಮುಖಗಳು ಮತ್ತೆ ಕಣದಲ್ಲಿ ಕಾಣಿಸಿ ಕೊಳ್ಳುವ ಸಾಧ್ಯತೆಯೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

3 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago