ಸುದ್ದಿಗಳು

ನ ಪಂ ಚುನಾವಣೆ : ಪ್ರಚಾರದತ್ತ ಪಕ್ಷಗಳ ಚಿತ್ತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 # ಸ್ಪೆಷಲ್ ಕರೆಸ್ಪಾಂಡೆಂಟ್ , ಸುಳ್ಯನ್ಯೂಸ್.ಕಾಂ

Advertisement

 

ಸುಳ್ಯ :  ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ತಲ್ಲೀನರಾಗಿದ್ದ ಪಕ್ಷಗಳ ಚಿತ್ತ ಇನ್ನು ಪ್ರಚಾರದತ್ತ ಹೊರಳಲಿದೆ.

ಚುನಾವಣೆ ಘೋಷಣೆಯಾದಲ್ಲಿಂದ ಆರಂಭಗೊಂಡ ಅಭ್ಯರ್ಥಿ ಆಯ್ಕೆ ಕಸರತ್ತಿನಿಂದ ಹೈರಾಣಾಗಿ ಸ್ವಲ್ಪ ರಿಲಾಕ್ಸ್ ಮೂಡ್ ಗೆ ಬಂದ ಪಕ್ಷದ ನೇತೃತ್ವ ಇನ್ನು ನಿಧಾನಕ್ಕೆ ಪ್ರಚಾರದ ಅಬ್ಬರದೆಡೆಗೆ ಧುಮುಕಬೇಕಾಗಿದೆ. ನಾಮಪತ್ರ ಸಲ್ಲಿಕೆ ಕೊನೆಗೊಂಡ ಮರುದಿನದಿಂದಲೇ ಅಭ್ಯರ್ಥಿಗಳು ಮತ್ತು ಸ್ಥಳೀಯ ನಾಯಕರು ತಮ್ಮ ವಾರ್ಡ್ ಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮನೆ ಮನೆ ಭೇಟಿ ನೀಡಿ ಮತದಾರರನ್ನು ಭೇಟಿ ಮಾಡುವ ಪ್ರಚಾರ ಕಾರ್ಯಕ್ಕೆ ಪಕ್ಷಗಳು ಆದ್ಯತೆ ನೀಡಲಿದ್ದಾರೆ. 20 ರಂದು ನಾಮಪತ್ರ ಹಿಂಪಡೆಯುವ ಸಮಯ ಮುಗಿದ ಬಳಿಕ ವಾರ್ಡ್ ಗಳಲ್ಲಿರುವ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಲಿದೆ. ಬಳಿಕ ಪ್ರಚಾರಕ್ಕೆ ಇನ್ನಷ್ಟು ವೇಗ ದೊರಕಲಿದ್ದು ಪ್ರಚಾರದ ರಣತಂತ್ರ ರೂಪಿಸಲಿದೆ.

ಬಿಜೆಪಿ ಇಂದು ಸಭೆ ನಡೆಸಿ ಚುನಾವಣಾ ಪ್ರಚಾರಕ್ಕೆ ರೂಪುರೇಷೆ ತಯಾರಿಸಿದೆ. ಕಾಂಗ್ರೆಸ್ ಸಭೆ ನಾಳೆ ನಡೆಯಲಿದ್ದು ರಣ ತಂತ್ರ ರೂಪಿಸಲಿದ್ದಾರೆ.

Advertisement

ನೇರ, ತ್ರಿಕೋನ ಸ್ಪರ್ಧಯ ರಂಗು:

ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಅಧಿಕಾರಕ್ಕಾಗಿ ಹೋರಾಟ ನಡೆಯಲಿದೆ. ಕೆಲವು ವಾರ್ಡ್ ಗಳಲ್ಲಿ ನೇರ ಸ್ಪರ್ಧೆ ನಡೆದರೆ ಹಲವು ವಾರ್ಡ್ ಗಳಲ್ಲಿ ತ್ರಿಕೋನ- ಚತುಷ್ಕೋನ ಸ್ಪರ್ಧೆಯ ರಂಗು ತರಲಿದೆ.

ಐದು ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ಎಲ್ಲಾ 20 ವಾರ್ಡ್ ಗಳಲ್ಲಿ ನಾಮಪತ್ರ ಸಲ್ಲಿಸಿದರೆ, ಜೆಡಿಎಸ್ ಎರಡು ವಾರ್ಡ್ ಗಳಲ್ಲಿ, ಎಸ್.ಡಿ.ಪಿ.ಐ ಐದು ವಾರ್ಡ್ ಗಳಲ್ಲಿ, ಆಮ್ ಆದ್ಮಿ ಪಕ್ಷ  ಮೂರು ವಾರ್ಡ್ ಗಳಲ್ಲಿ ಮತ್ತು ವಿವಿಧ ವಾರ್ಡ್ ಗಳಲ್ಲಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದು ಚುನಾವಣಾ ಕಣ ರಂಗೇರಿಸಲಿದೆ.

ಮೂರು ಬಾರಿ ನಿರಂತರ ಅಧಿಕಾರ ನಡೆಸಿದ ಬಿಜೆಪಿ ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡಿದ್ದರೆ, ಕಾಂಗ್ರೆಸ್ ಹಿರಿಯರಿಗೆ ಮತ್ತು ಹೊಸಬರಿಗೆ ಎರಡೂ ವಿಭಾಗಕ್ಕೂ ಆದ್ಯತೆ ನೀಡಿದೆ. ಬಿಜೆಪಿ 19 ಮಂದಿ ಹೊಸಬರು ಮತ್ತು ಒಬ್ಬರು ಮಾಜಿ ಸದಸ್ಯರಿಗೆ ಟಿಕೆಟ್ ನೀಡಿದೆ. ಇವರಲ್ಲಿ ಒಂದಿಬ್ಬರು ಈ ಹಿಂದೆ ಸ್ಪರ್ಧಿಸಿದ್ದರೂ ಆಯ್ಕೆಯಾಗಿರಲಿಲ್ಲ.

ಕಾಂಗ್ರೆಸ್ ಆರು ಮಂದಿ ಮಾಜಿ ಸದಸ್ಯರಿಗೆ ಮತ್ತು 14 ಮಂದಿ ಹೊಸ ಮುಖಗಳಿಗೆ ಸೀಟ್ ನೀಡಿದೆ. ಕೆಲವು ವಾರ್ಡ್ ಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿಗಳು, ಆಮ್ ಆದ್ಮಿ ಪಕ್ಷದ ಬೆಂಬಲಿತರು ಮತ್ತು ಪಕ್ಷೇತರರು ಸ್ಪರ್ಧೆ ನೀಡಲಿದ್ದಾರೆ. ಜೆಡಿಎಸ್ ಎರಡು ಕಡೆ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಏರ್ಪಡುವ ಸಾಧ್ಯತೆ ಇದ್ದರೂ ಸೀಟ್ ಹಂಚಿಕೆಯ ಚಿತ್ರಣ ಸ್ಪಷ್ಟವಾಗಿಲ್ಲ. ಇನ್ನು ತಲಾ ಮೂರು ವಾರ್ಡ್ ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಬಂಡಾಯ ಅಭ್ಯರ್ಥಿಗಳ ಬಿಸಿ ತಟ್ಟಲಿದೆ. ಇದು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕಾದು ನೋಡಬೇಕಾಗಿದೆ

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

4 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

10 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

10 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

11 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

12 hours ago

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…

13 hours ago