ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ತಲೆ ಎತ್ತಿರುವ ಬಂಡಾಯ ಶಮನಕ್ಕೆ ಜಿಲ್ಲಾ ಮಟ್ಟದ ನಾಯಕರ ತಂಡ ಪ್ರಯತ್ನ ಆರಂಭಿಸಿದೆ.
ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತದ ಶಮನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸುಳ್ಯಕ್ಕೆ ಆಗಮಿಸಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಗೆ 10ನೇ ವಾರ್ಡ್ ನಲ್ಲಿ ಉಂಟಾದ ಬಂಡಾಯದ ಬಿಸಿ ಬಂಡಾಯ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗುವುದರೊಂದಿಗೆ ಶಮನಗೊಂಡಿದೆ. ಇಲ್ಲಿ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದ ಸುನಿಲ್ ಕುಮಾರ್ ನಾಮಪತ್ರ ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿದ್ದು ಬಿಜೆಪಿ ನಿಟ್ಟುಸಿರು ಬಿಡುವಂತಾಗಿದೆ. 20ನೇ ವಾರ್ಡ್ ನಲ್ಲಿ ಮತ್ತು 19ನೇ ವಾರ್ಡ್ ನಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಗಳಿಗೆ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಶನಿವಾರ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಸೋಮವಾರದ ವೇಳೆಗೆ ಎಲ್ಲಾ ಬಂಡಾಯವೂ ಶಮನಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ನೇತಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ನಗರ ಪಂಚಾಯತ್ ಆಡಳಿತ ಮರಳಿ ಪಡೆಯಲು ಹವಣಿಸುತ್ತಿರುವ ಕಾಂಗ್ರೆಸ್ ಗೆ ಮೂರು ವಾರ್ಡ್ ಗಳಲ್ಲಿ ಉಂಟಾಗಿರುವ ಬಂಡಾಯ ನುಂಗಲಾರದ ತುತ್ತಾಗಿದೆ. ಇದರ ಶಮನಕ್ಕೆ ಜಿಲ್ಲಾ ಮುಖಂಡರು ಆಗಮಿಸಿ ಬಂಡಾಯ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಬೋರುಗುಡ್ಡೆ ವಾರ್ಡ್ ನಲ್ಲಿ ಆರ್.ಕೆ.ಮಹಮ್ಮದ್ ಅವರಿಗೆ ಟಿಕೆಟ್ ನೀಡದಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ತಮ್ಮ ನಿಲುವನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…