Advertisement
Political mirror

ನ.ಪಂ.ಚುನಾವಣೆ: ಬಂಡಾಯ “ಥಂಡಾಯ”ಕ್ಕೆ ಜಿಲ್ಲಾ ಮುಖಂಡರ ದಂಡು…!

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ತಲೆ ಎತ್ತಿರುವ ಬಂಡಾಯ ಶಮನಕ್ಕೆ ಜಿಲ್ಲಾ ಮಟ್ಟದ ನಾಯಕರ ತಂಡ ಪ್ರಯತ್ನ ಆರಂಭಿಸಿದೆ.

ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತದ ಶಮನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸುಳ್ಯಕ್ಕೆ ಆಗಮಿಸಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಗೆ 10ನೇ ವಾರ್ಡ್ ನಲ್ಲಿ ಉಂಟಾದ ಬಂಡಾಯದ ಬಿಸಿ ಬಂಡಾಯ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗುವುದರೊಂದಿಗೆ ಶಮನಗೊಂಡಿದೆ. ಇಲ್ಲಿ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದ ಸುನಿಲ್ ಕುಮಾರ್ ನಾಮಪತ್ರ ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿದ್ದು ಬಿಜೆಪಿ ನಿಟ್ಟುಸಿರು ಬಿಡುವಂತಾಗಿದೆ. 20ನೇ ವಾರ್ಡ್ ನಲ್ಲಿ ಮತ್ತು 19ನೇ ವಾರ್ಡ್ ನಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಗಳಿಗೆ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಶನಿವಾರ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಸೋಮವಾರದ ವೇಳೆಗೆ ಎಲ್ಲಾ ಬಂಡಾಯವೂ ಶಮನಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ನೇತಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ನಗರ ಪಂಚಾಯತ್ ಆಡಳಿತ ಮರಳಿ ಪಡೆಯಲು ಹವಣಿಸುತ್ತಿರುವ ಕಾಂಗ್ರೆಸ್ ಗೆ ಮೂರು ವಾರ್ಡ್ ಗಳಲ್ಲಿ ಉಂಟಾಗಿರುವ ಬಂಡಾಯ ನುಂಗಲಾರದ ತುತ್ತಾಗಿದೆ. ಇದರ ಶಮನಕ್ಕೆ ಜಿಲ್ಲಾ ಮುಖಂಡರು ಆಗಮಿಸಿ ಬಂಡಾಯ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಬೋರುಗುಡ್ಡೆ ವಾರ್ಡ್ ನಲ್ಲಿ ಆರ್.ಕೆ.ಮಹಮ್ಮದ್ ಅವರಿಗೆ ಟಿಕೆಟ್ ನೀಡದಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ತಮ್ಮ ನಿಲುವನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

4 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

4 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago