Advertisement
ಸುದ್ದಿಗಳು

ನ ಪಂ ಚುನಾವಣೆ : ಬಿಜೆಪಿಯಲ್ಲಿ ಮಾಜಿಗಳಿಗೆ ಟಿಕೆಟ್ ಇಲ್ಲ

Share

ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.

Advertisement
Advertisement

ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್‍ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

4 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

9 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

10 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago