Advertisement
ಸುದ್ದಿಗಳು

ನ ಪಂ ಚುನಾವಣೆ : ಬಿಜೆಪಿಯಲ್ಲಿ ಮಾಜಿಗಳಿಗೆ ಟಿಕೆಟ್ ಇಲ್ಲ

Share

ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.

Advertisement

ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್‍ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

3 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

3 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

11 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

12 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

23 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago