ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.
ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…