Advertisement
ಸುದ್ದಿಗಳು

ನ ಪಂ ಚುನಾವಣೆ : ಬಿಜೆಪಿಯಲ್ಲಿ ಮಾಜಿಗಳಿಗೆ ಟಿಕೆಟ್ ಇಲ್ಲ

Share

ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.

ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್‍ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 days ago