ಸುಳ್ಯ. ನಗರ ಪಂಚಾಯತ್ ಚುನಾವಣೆಗೆ ಬಿಜೆಪಿಯ 20 ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಘೋಷಣೆ ಪೂರ್ತಿಯಾಗಿದ್ದು ಕಳೆದ ಆಡಳಿತ ಮಂಡಳಿಯಲ್ಲಿದ್ದ ಯಾವ ಸದಸ್ಯರಿಗೂ ಈ ಬಾರಿ ಟಿಕೇಟ್ ನೀಡಿಲ್ಲ. ಸಂಪೂರ್ಣ ಹೊಸ ಮುಖಗಳ ತಂಡವನ್ನು ಕಣಕ್ಕಿಳಿಸಲಾಗಿದೆ.
ಸತತ ಮೂರು ಬಾರಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಗೆ ಸಹಜವಾಗಿ ಎದುರಾಗಬಹುದಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹೊಸ ತಂತ್ರ ರೂಪಿಸಿದೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ, ಶೀಲಾವತಿ ಮಾಧವ ಈ ಮೂವರು ಈ ಬಾರಿ ಕಣದಲ್ಲಿ ಇಲ್ಲ. ಹಿರಿಯ ಸದಸ್ಯರಾದ ಗೋಪಾಲ ನಡುಬೈಲು, ರಮಾನಂದ ರೈ, ಮೋಹಿನಿ ನಾಗರಾಜ್, ಮೀನಾಕ್ಷಿ ಕೂಡ ಈ ಬಾರಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಮಾಜಿ ಸದಸ್ಯರ ಪೈಕಿ ಸ್ಥಾನ ಪಡೆದವರು ಸರೋಜಿನಿ ಪೆಲ್ತಡ್ಕ ಮಾತ್ರ. 2008-13ರ ಅವಧಿಯ ನ.ಪಂ.ನಲ್ಲಿ ಸರೋಜಿನಿ ಸದಸ್ಯರಾಗಿದ್ದರು. ಪ್ರತಿ ವಾರ್ಡ್ಗಳ ಕಾರ್ಯಕರ್ತರ ಸೂಚನೆಯ ಮೇರೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗಿದೆ. ಹೊಸ ಹುರುಪಿನೊಂದಿಗೆ ಕೆಲಸ ಮಾಡಲಿ ಎಂಬ ದೃಷ್ಠಿಯಿಂದ ಹೊಸಬರಿಗೆ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. ಕೆಲವು ಹಿರಿಯ ಸದಸ್ಯರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರೂ ಸಂಪೂರ್ಣ ಹೊಸ ಮುಖಗಳಿಗೆ ಆದ್ಯತೆ ಎಂಬ ನಿಲುವನ್ನು ಬಿಜೆಪಿ ತಳೆದಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…