ಸುಳ್ಯ: ಒಂದು ಕಾಲದಲ್ಲಿ ನಗರ ಪಂಚಾಯತ್ ಗೆ ಪ್ರತಿನಿಧಿಗಳನ್ನು ಕಳಿಸುತ್ತಿದ್ದ ಸಿಪಿಐಎಂ ಈ ಬಾರಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ.
ಹಿಂದೆಲ್ಲ ನಗರ ಪಂಚಾಯತ್ ಮತ್ತಿತರ ಸ್ಥಳೀಯ ಸಂಸ್ಥೆಗಳಲ್ಲಿ ಸಿಪಿಐಎಂ ಸದಸ್ಯರು ಇರುತ್ತಿದ್ದರು. ನಗರ ಪಂಚಾಯತ್ ನ ಕಳೆದ ಎರಡು ಅವಧಿಯ ಆಡಳಿತ ಮಂಡಳಿಯಲ್ಲಿ ಸಿಪಿಐಎಂ ಪ್ರತಿನಿಧಿ ಇರಲಿಲ್ಲ. ಸಂಘಟನಾ ಚಟುವಟಿಕೆಯಲ್ಲಿ ಪಕ್ಷವು ಸುಳ್ಯದಲ್ಲಿ ಸಕ್ರೀಯವಾಗಿದ್ದರೂ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲ.
‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯಾತೀತ ಶಕ್ತಿಗಳನ್ನು ಸಿಪಿಐಎಂ ಯಾವತ್ತೂ ಬೆಂಬಲಿಸುತ್ತದೆ. ಈ ಬಾರಿ ನಗರ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ. ಚುನಾವಣೆ ಕುರಿತ ಮುಂದಿನ ನಡೆಯನ್ನು ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ರಾಬರ್ಟ್ ಡಿಸೋಜ ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಸಂಘಟನೆಯಲ್ಲಿ ಸಕ್ರೀಯ:
ಸಿಪಿಐಎಂ ಪಕ್ಷದ ಭಾಗವಾದ ಸಿಐಟಿಯುವಿನ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಸುಳ್ಯದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತಿವೆ. ಕಟ್ಟಡ ಕಾರ್ಮಿಕರ ಸಂಘಟನೆ, ಬೀಡಿ ಕಾರ್ಮಿಕರ ಸಂಘಟನೆ, ಬಿಸಿ ಊಟ ಕಾರ್ಮಿಕರ ಸಂಘಟನೆ, ರಿಕ್ಷಾ ಚಾಲಕರ ಸಂಘಟನೆ ಹೀಗೆ ಹಲವು ಸಂಘಟನೆಗಳು ಚಟುವಟಿಕೆಯಿಂದ ಕೂಡಿದೆ. ಹಲವು ಕಾರ್ಯಕ್ರಮಗಳನ್ನೂ, ಹೋರಾಟಗಳನ್ನು ಸಂಘಟಿಸುತ್ತಾ ಬರುತಿದೆ. ಸಂಘಟನಾತ್ಮಕವಾಗಿ ಸಕ್ರೀಯವಾಗಿದ್ದರೂ ಚುನಾವಣಾ ರಾಜಕೀಯದಿಂದ ಮಾತ್ರ ಕೆಲವು ಸಮಯಗಳಿಂದ ಪಕ್ಷ ದೂರ ಉಳಿದಿದೆ.
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…