Advertisement
ಸುದ್ದಿಗಳು

ನ.೨ರಂದು ಅಡಿಕೆ ಹಳದಿ ರೋಗ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ವಿಚಾರ ಸಂಕಿರಣ

Share

ಸುಳ್ಯ:ಅರಂತೋಡು, ಸಂಪಾಜೆ ಮತ್ತು ಪರಿಸರದಲ್ಲಿ ಬಾಧಿಸಿರುವ ಅಡಿಕೆ ಎಲೆ ಹಳದಿ ರೋಗದ ಕುರಿತು ಅಧ್ಯಯನ ಮತ್ತು ಬದಲಿ ಕೃಷಿಯ ಕುರಿತು ಸರಕಾರಕ್ಕೆ ಪರಿಣಾಮಕಾರಿ ರೀತಿಯಲ್ಲಿ ಹಕ್ಕೊತ್ತಾಯ ಮಂಡಿಸುವ ಸಲುವಾಗಿ ಅಡಿಕೆ ಎಲೆ ಹಳದಿ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ಬದಲಿ ಕೃಷಿಯ ಕುರಿತು ವಿಚಾರ ಸಂಕಿರಣವು ನ.೨ ರಂದು ಅರಂತೋಡು ಸಹಕಾರಿ ಸಂಘದ ಸಿರಿ ಸೌಧದಲ್ಲಿ ನಡೆಯಲಿದೆ.

ಅಡಿಕೆ ಎಲೆ ಹಳದಿ ರೋಗ ಇಂದು ತಾಲೂಕಿನ ಬಹುತೇಕ ಕಡೆಗಳಲ್ಲಿ ಪಸರಿಸಿದೆ. ಅರಂತೋಡು, ತೊಡಿಕಾನ, ಸಂಪಾಜೆ, ಆಲೆಟ್ಟಿ, ಉಬರಡ್ಕ, ಮರ್ಕಂಜ ಮತ್ತು ಮಡಪ್ಪಾಡಿ ಗ್ರಾಮದ ಶೇ.೭೦ರಷ್ಟು ತೋಟದಲ್ಲಿ ಅಡಿಕೆ ನಾಶದ ಅಂಚಿನಲ್ಲಿದೆ. ಕೊಡಗಿನ ಪೆರಾಜೆ, ಸಂಪಾಜೆ ಹಾಗೂ ಚೆಂಬು ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ. ಹಳದಿ ರೋಗ ಪೀಡಿತ ಪ್ರದೇಶದ ಜಂಟಿ ಸಮೀಕ್ಷೆ ನಡೆಸುವುದು, ವಿಶೇಷ ಭಾದಿತ ಪ್ರದೇಶವೆಂದು ಘೋಷಣೆಗೆ ಮನವಿ, ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಮನವಿ, ರೈತರಿಗೆ ಬದಲಿ ಕೃಷಿಗೆ ಉತ್ತೇಜನ ಮೊದಲಾದ ಬೇಡಿಕೆಗಳನ್ನು ಹಕ್ಕೊತ್ತಾಯದ ರೀತಿಯಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಲಾಗುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಅಂಗಾರ ವಹಿಸಲಿದ್ದು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ವಿಷಯ ಮಂಡನೆ ಮಾಡಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಸತೀಶ್‌ಚಂದ್ರ ಎಸ್.ಆರ್, ತಾ.ಪಂ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ತೋಟಗಾರಿಕಾ ಇಲಾಖೆ ಯ ಉಪನಿರ್ದೇಶಕ ಎಚ್ ಆರ್ ನಾಯಕ್, ತಹಶಿಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಪಂ. ಕಾರ್ಯನಿರ್ವ ಹಣಾಧಿಕಾರಿ ಭವಾನಿಶಂಕರ ಎನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

6 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

6 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

6 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

13 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

14 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

14 hours ago