Advertisement
ಸುದ್ದಿಗಳು

ನ.೨ರಂದು ಅಡಿಕೆ ಹಳದಿ ರೋಗ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ವಿಚಾರ ಸಂಕಿರಣ

Share

ಸುಳ್ಯ:ಅರಂತೋಡು, ಸಂಪಾಜೆ ಮತ್ತು ಪರಿಸರದಲ್ಲಿ ಬಾಧಿಸಿರುವ ಅಡಿಕೆ ಎಲೆ ಹಳದಿ ರೋಗದ ಕುರಿತು ಅಧ್ಯಯನ ಮತ್ತು ಬದಲಿ ಕೃಷಿಯ ಕುರಿತು ಸರಕಾರಕ್ಕೆ ಪರಿಣಾಮಕಾರಿ ರೀತಿಯಲ್ಲಿ ಹಕ್ಕೊತ್ತಾಯ ಮಂಡಿಸುವ ಸಲುವಾಗಿ ಅಡಿಕೆ ಎಲೆ ಹಳದಿ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ ಮತ್ತು ಬದಲಿ ಕೃಷಿಯ ಕುರಿತು ವಿಚಾರ ಸಂಕಿರಣವು ನ.೨ ರಂದು ಅರಂತೋಡು ಸಹಕಾರಿ ಸಂಘದ ಸಿರಿ ಸೌಧದಲ್ಲಿ ನಡೆಯಲಿದೆ.

ಅಡಿಕೆ ಎಲೆ ಹಳದಿ ರೋಗ ಇಂದು ತಾಲೂಕಿನ ಬಹುತೇಕ ಕಡೆಗಳಲ್ಲಿ ಪಸರಿಸಿದೆ. ಅರಂತೋಡು, ತೊಡಿಕಾನ, ಸಂಪಾಜೆ, ಆಲೆಟ್ಟಿ, ಉಬರಡ್ಕ, ಮರ್ಕಂಜ ಮತ್ತು ಮಡಪ್ಪಾಡಿ ಗ್ರಾಮದ ಶೇ.೭೦ರಷ್ಟು ತೋಟದಲ್ಲಿ ಅಡಿಕೆ ನಾಶದ ಅಂಚಿನಲ್ಲಿದೆ. ಕೊಡಗಿನ ಪೆರಾಜೆ, ಸಂಪಾಜೆ ಹಾಗೂ ಚೆಂಬು ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ. ಹಳದಿ ರೋಗ ಪೀಡಿತ ಪ್ರದೇಶದ ಜಂಟಿ ಸಮೀಕ್ಷೆ ನಡೆಸುವುದು, ವಿಶೇಷ ಭಾದಿತ ಪ್ರದೇಶವೆಂದು ಘೋಷಣೆಗೆ ಮನವಿ, ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಮನವಿ, ರೈತರಿಗೆ ಬದಲಿ ಕೃಷಿಗೆ ಉತ್ತೇಜನ ಮೊದಲಾದ ಬೇಡಿಕೆಗಳನ್ನು ಹಕ್ಕೊತ್ತಾಯದ ರೀತಿಯಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಲಾಗುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಅಂಗಾರ ವಹಿಸಲಿದ್ದು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ವಿಷಯ ಮಂಡನೆ ಮಾಡಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಸತೀಶ್‌ಚಂದ್ರ ಎಸ್.ಆರ್, ತಾ.ಪಂ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ತೋಟಗಾರಿಕಾ ಇಲಾಖೆ ಯ ಉಪನಿರ್ದೇಶಕ ಎಚ್ ಆರ್ ನಾಯಕ್, ತಹಶಿಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಪಂ. ಕಾರ್ಯನಿರ್ವ ಹಣಾಧಿಕಾರಿ ಭವಾನಿಶಂಕರ ಎನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago