Advertisement
ಸುದ್ದಿಗಳು

ನ.1ರಿಂದ 7 : 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮ

Share

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ಸಹಯೋಗದಲ್ಲಿ ‘ನಮ್ಮ ನಡೆ ವಿದ್ಯಾರ್ಥಿಗಳೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಸುಳ್ಯ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳಲ್ಲಿ 5 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ `ಸಾಹಿತ್ಯ ಸಂಭ್ರಮ’ ನ.1ರಿಂದ 7ರ ತನಕ ನಡೆಯಲಿದೆ.

Advertisement

ನ.1 ರಂದು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಾಹಿತ್ಯ ಸಂಭ್ರಮ ಉದ್ಘಾಟನೆ ಹಾಗೂ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಅರಂತೋಡು ನೆಹರು ಸ್ಮಾರಕ ಪ. ಪೂ. ಕಾಲೇಜಿನ ವಿದ್ಯಾರ್ಥಿನಿ ಗಾನಶ್ರೀ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಲಲಿತಾಜ ಮಲ್ಲಾರ ನೆರವೇರಿಸಲಿದ್ದಾರೆ. ಸಮ್ಮೇಳನದಲ್ಲಿ ಕರ್ನಾಟಕದಲ್ಲಿ ಕನ್ನಡದ ಇಂದಿನ ಸ್ಥಿತಿಗತಿ’ ಎಂಬ ವಿಚಾರದ ಬಗ್ಗೆ ವಿಚಾರ ಗೋಷ್ಠಿ ನಡೆಯಲಿದೆ. ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೀತಿ ಯು.ಭಟ್ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕವಿಗೋಷ್ಠಿ ನಡೆಯಲಿದೆ.

ನ.2 ರಂದು ಸಾಧನಾ ಶೃಂಗ-ಸಾಹಿತ್ಯ ಸಂಭ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ನ.3ರಂದು ದಿ.ಪಡ್ಡಂಬೈಲು ವೆಂಕಟ್ರಮಣ ಗೌಡರ ಸ್ಮರಣಾರ್ಥ ‘ಜೀವನ ಮೌಲ್ಯಗಳು’ ಎಂಬ ಉಪನ್ಯಾಸ ಕಾರ್ಯಕ್ರಮ ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘ ಸುಳ್ಯ ಹಾಗೂ ಸಂದ್ಯಾರಶ್ಮಿ ಪಿಂಚಣಿದಾರರ ಸಂಘ ಸುಳ್ಯ ಇದರ ಸಹಯೋಗದಲ್ಲಿ ನಡೆಯಲಿದೆ.

ನ.4ರಂದು ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇವರ ಸಹಕಾರದಲ್ಲಿ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗಾಗಿ ನಾಣ್ಯಗಳ ಪ್ರದರ್ಶನ ಹಾಗೂ ಸ್ಪರ್ಧಾ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಲಿದೆ. ನ.5 ರಂದು ಸರಕಾರಿ ಪ್ರೌಢಶಾಲೆ ಎಣ್ಮೂರು ಹಾಗೂ ಸುಳ್ಯ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಸಹಕಾರದಲ್ಲಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ನ.6ರಂದು ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವವಿದ್ಯಾಲಯದ ಸಹಕಾರದಲ್ಲಿ ಮಹಿಳಾ ಸಾಹಿತ್ಯ ಸಂಭ್ರಮ ನಡೆಯಲಿದೆ. ‘ಜಾನಪದ ಸಾಹಿತ್ಯದಲ್ಲಿ ಸ್ತ್ರೀಸಂವೇದನೆ’ ಎಂಬ ವಿಷಯದ ಬಗ್ಗೆ ಪ್ರವಚನ ನಡೆಯಲಿದೆ. ನ.7 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದಲ್ಲಿ ‘ಜಯಹೇ ಕರ್ನಾಟಕ ಮಾತೆ’ ಗೀತಕಥಾ ಕಲಾಕ್ಷೇಪ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು ಖ್ಯಾತ ಗಾಯಕ ಶಶಿಧರ ಕೋಟೆ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

11 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

17 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

21 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

22 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

22 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago