Advertisement
ಸುದ್ದಿಗಳು

ನ.1ರಿಂದ 7 : 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮ

Share

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ಸಹಯೋಗದಲ್ಲಿ ‘ನಮ್ಮ ನಡೆ ವಿದ್ಯಾರ್ಥಿಗಳೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಸುಳ್ಯ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳಲ್ಲಿ 5 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ `ಸಾಹಿತ್ಯ ಸಂಭ್ರಮ’ ನ.1ರಿಂದ 7ರ ತನಕ ನಡೆಯಲಿದೆ.

ನ.1 ರಂದು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಾಹಿತ್ಯ ಸಂಭ್ರಮ ಉದ್ಘಾಟನೆ ಹಾಗೂ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಅರಂತೋಡು ನೆಹರು ಸ್ಮಾರಕ ಪ. ಪೂ. ಕಾಲೇಜಿನ ವಿದ್ಯಾರ್ಥಿನಿ ಗಾನಶ್ರೀ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಲಲಿತಾಜ ಮಲ್ಲಾರ ನೆರವೇರಿಸಲಿದ್ದಾರೆ. ಸಮ್ಮೇಳನದಲ್ಲಿ ಕರ್ನಾಟಕದಲ್ಲಿ ಕನ್ನಡದ ಇಂದಿನ ಸ್ಥಿತಿಗತಿ’ ಎಂಬ ವಿಚಾರದ ಬಗ್ಗೆ ವಿಚಾರ ಗೋಷ್ಠಿ ನಡೆಯಲಿದೆ. ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೀತಿ ಯು.ಭಟ್ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕವಿಗೋಷ್ಠಿ ನಡೆಯಲಿದೆ.

ನ.2 ರಂದು ಸಾಧನಾ ಶೃಂಗ-ಸಾಹಿತ್ಯ ಸಂಭ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ನ.3ರಂದು ದಿ.ಪಡ್ಡಂಬೈಲು ವೆಂಕಟ್ರಮಣ ಗೌಡರ ಸ್ಮರಣಾರ್ಥ ‘ಜೀವನ ಮೌಲ್ಯಗಳು’ ಎಂಬ ಉಪನ್ಯಾಸ ಕಾರ್ಯಕ್ರಮ ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘ ಸುಳ್ಯ ಹಾಗೂ ಸಂದ್ಯಾರಶ್ಮಿ ಪಿಂಚಣಿದಾರರ ಸಂಘ ಸುಳ್ಯ ಇದರ ಸಹಯೋಗದಲ್ಲಿ ನಡೆಯಲಿದೆ.

ನ.4ರಂದು ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಇವರ ಸಹಕಾರದಲ್ಲಿ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗಾಗಿ ನಾಣ್ಯಗಳ ಪ್ರದರ್ಶನ ಹಾಗೂ ಸ್ಪರ್ಧಾ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಲಿದೆ. ನ.5 ರಂದು ಸರಕಾರಿ ಪ್ರೌಢಶಾಲೆ ಎಣ್ಮೂರು ಹಾಗೂ ಸುಳ್ಯ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಸಹಕಾರದಲ್ಲಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ನ.6ರಂದು ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವವಿದ್ಯಾಲಯದ ಸಹಕಾರದಲ್ಲಿ ಮಹಿಳಾ ಸಾಹಿತ್ಯ ಸಂಭ್ರಮ ನಡೆಯಲಿದೆ. ‘ಜಾನಪದ ಸಾಹಿತ್ಯದಲ್ಲಿ ಸ್ತ್ರೀಸಂವೇದನೆ’ ಎಂಬ ವಿಷಯದ ಬಗ್ಗೆ ಪ್ರವಚನ ನಡೆಯಲಿದೆ. ನ.7 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದಲ್ಲಿ ‘ಜಯಹೇ ಕರ್ನಾಟಕ ಮಾತೆ’ ಗೀತಕಥಾ ಕಲಾಕ್ಷೇಪ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು ಖ್ಯಾತ ಗಾಯಕ ಶಶಿಧರ ಕೋಟೆ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

8 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

9 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

9 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

17 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

17 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago