Advertisement
ಸುದ್ದಿಗಳು

ನ.1 ರಿಂದ ಕೊಡಗು ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭ

Share

ಮಡಿಕೇರಿ : ಜಾತ್ಯತೀತ ಜನತಾದಳವನ್ನು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸುವ ಮತ್ತು ಸಂಘಟಿಸುವ ಉದ್ದೇಶದಿಂದ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನ.1 ರಂದು ಚಾಲನೆ ನೀಡಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡ್ಲಿಪೇಟೆಯ ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಸದಸ್ಯತ್ವ ಅಭಿಯಾನದ ಪಾದಯಾತ್ರೆಯನ್ನು ಆರಂಭಿಸಲಾಗುವುದು ಎಂದರು.

ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಗುಂಪು ಅಭಿಯಾನದ ಯಶಸ್ಸಿಗೆ ಕೈ ಜೋಡಿಸಲಿದೆ. ಮನೆ ಮನೆಗೆ ತೆರಳಿ ಸದಸ್ಯರನ್ನು ಆಯ್ಕೆ ಮಾಡುವುದಲ್ಲದೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 14 ತಿಂಗಳ ತಮ್ಮ ಅಧಿಕಾರವಧಿಯಲ್ಲಿ ಮಾಡಿದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಗಣೇಶ್ ತಿಳಿಸಿದರು.
ರೈತರ ಸಾಲಮನ್ನಾದಂತಹ ದಿಟ್ಟ ನಿರ್ಧಾರವನ್ನು ಕೈಗೊಂಡ ಕುಮಾರಸ್ವಾಮಿ ಅವರು ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸಂತ್ರಸ್ತರಿಗಾಗಿ ಸುಮಾರು 800 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಅಲ್ಲದೆ ಎರಡು ನೂತನ ತಾಲ್ಲೂಕುಗಳನ್ನು ರಚಿಸುವ ಮೂಲಕ ಕೊಡಗಿನ ಅಭಿವೃದ್ಧಿಗೆ ಪೂರಕವಾದ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಈ ವಿಚಾರಗಳನ್ನು ಅಭಿಯಾನದ ಸಂದರ್ಭ ಜನರ ಮುಂದಿಡಲಾಗುವುದೆಂದರು.

ಕಾಂಗ್ರೆಸ್ ಕೋಮುವಾದವನ್ನು ಹಬ್ಬುವ ಪಕ್ಷವಾಗಿದ್ದು, ಯಾರಿಗೂ ಬೇಡವಾದ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದಿರುವುದು ಸರಿಯಾದ ಕ್ರಮವಲ್ಲ ಎಂದರು.
ಟಿಪ್ಪುವನ್ನು ವಿವಾದದ ಸುಳಿಯಲ್ಲಿ ನೋಡುವಂತಹ ಪರಿಸ್ಥಿತಿ ಎದುರಾಗಿದ್ದು, ಇದಕ್ಕೆ ಮೂಲ ಕಾರಣ ಕಾಂಗ್ರೆಸ್ ಎಂದು ಆರೋಪಿಸಿದರು. ಜಾತಿ ಮತ್ತು ಪಂಗಡಗಳ ವಿಭಜನೆಯಿಂದ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ ಎಂದರು.

ಜೆಡಿಎಸ್ ಅಲ್ಪಾಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್‍ಖಾನ್ ಮಾತನಾಡಿ, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ ಅನರ್ಹ ಶಾಸಕರಿಂದ ಅಲ್ಪಾಸಂಖ್ಯಾತರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ಟೀಕಿಸಿದರು. ಅಲ್ಪಸಂಖ್ಯಾತರ ಮತಗಳನ್ನು ಕೂಡ ಅನರ್ಹರು ಪಡೆದಿದ್ದಾರೆ ಎಂದರು.
ಓಲೈಕೆ ಮತ್ತು ಜಾತಿ ರಾಜಕರಣಕ್ಕೆ ಅಲ್ಪಾಸಂಖ್ಯಾತರು ಬಲಿಯಾಗಬಾರದು ಎಂದು ಕರೆ ನೀಡಿದ ಇಸಾಕ್‍ಖಾನ್, ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯ ಮತ್ತು ಕೊಡಗು ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಿ ಅಚ್ಚಪ್ಪ ಮಾತನಾಡಿ, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಸುಮಾರು 15 ಕೋಟಿ ರೂ. ಗಳನ್ನು ಜಿಲ್ಲಾಡಳಿತ ಖರ್ಚುಮಾಡದೆ ಉಳಿಸಿಕೊಂಡಿರುವುದರಿಂದ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಮಳೆಹಾನಿಯಿಂದ ನೂರಾರು ಮಂದಿ ಸಂತ್ರಸ್ತರು ಸಂಕಷ್ಟದಲ್ಲೇ ದಿನದೂಡುತ್ತಿದ್ದು, ಸರ್ಕಾರ ಶೀಘ್ರ ಪರಿಹಾರ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ, ಯುವ ಘಟಕದ ಅಧ್ಯಕ್ಷ ಸಿ.ಎಲ್.ವಿಶ್ವ ಹಾಗೂ ಸೋಮವಾರಪೇಟೆ ಅಧ್ಯಕ್ಷ ನಾಗರಾಜು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 hour ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

24 hours ago