ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…