ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…